Ripponpete

ಸಾವಿನಲ್ಲೂ ಸಾರ್ಥಕತೆ ಮೆರೆದ ಪತ್ರಕರ್ತ ಎಸ್.ಜಿ.ರಂಗನಾಥ !

RIPPONPETE | ಭಾನುವಾರ ಸಂಜೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ಹಾಗೂ ಸಹಕಾರಿ ಧುರೀಣ ಅರಸಾಳು ಎಸ್.ಜಿ.ರಂಗನಾಥ ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

WhatsApp Group Join Now
Telegram Group Join Now
Instagram Group Join Now

ನಾಲ್ಕು ಐದು ದಶಕಗಳ ಕಾಲ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡು ಹತ್ತು ಹಲವು ಸಹಕಾರ ಸಂಘದಲ್ಲಿನ ಲೋಪದೋಷಗಳನ್ನು ಪತ್ತೆ ಹಚ್ಚಿ ರೈತ ಸದಸ್ಯರಿಗೆ ಸರ್ಕಾರದಿಂದ ದೊರೆಯುವಂತಹ ಹಲವು ಸೌಲಭ್ಯಗಳನ್ನು ಕೊಡಿಸುವ ಕಾರ್ಯದಲ್ಲಿ ಸದಾ ಶ್ರಮಿಸುತ್ತಿದ್ದು ತಮ್ಮ 93 ವಸಂತ ಕಾಲದಲ್ಲಿಯೂ ಯಾರ ಬಳಿ ಕೈ ಚಾಚದೇ ಸ್ವಾವಲಂಬಿ ಬದುಕು ಕಟ್ಟಿಕೊಂಡು ಸರಳ ಜೀವನ ನಡೆಸಿದ ವ್ಯಕ್ತಿತ್ವ ಎಸ್.ಜಿ.ರಂಗನಾಥರದು.

ಆಡಂಬರ, ಐಶಾರಾಮಿ ಜೀವನ ನಡೆಸುವ ಬದಲು ಸರಳವಾಗಿ ಇನ್ನೊಬ್ಬರಿಗೆ ಮಾದರಿಯಾಗಿ ಬದುಕಬೇಕು ಎಂಬ ಧ್ಯೇಯವಾಕ್ಯದೊಂದಿಗೆ ಅಪ್ಪಟ ಗಾಂಧಿಯಂತಾಗಿ ಖಾದಿ ಬಟ್ಟೆ ಹಾಕಿಕೊಂಡು ಸದಾ ಗ್ರಾಮೀಣ ಬಡ ರೈತಾಪಿ ವರ್ಗದದವರ ಹಿತಚಿಂತನೆಯಲ್ಲಿ ಕಡಿಮೆ ಖರ್ಚಿನಲ್ಲಿ ರಾಜಧಾನಿಗೆ ಹೋಗಿ ಬರುವ ರೈಲ್ವೆಗೆ ಜನಪ್ರತಿನಿಧಿಗಳಿಗೆ ಪತ್ರವನ್ನು ಬರೆಯುವುದರ ಮೂಲಕ ಎಚ್ಚರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡವರು.

ಕಣ್ಣುಗಳು ಮಣ್ಣಾಗುವ ಬದಲು ನನ್ನ ಕಣ್ಣುಗಳು ಇನ್ನೊಬ್ಬರಿಗೆ ಬೆಳಕಾಗುವಂತಾಗಲಿ ಎಂಬ ಧ್ಯೇಯದೊಂದಿಗೆ ತಮ್ಮ ಮರಣ ನಂತರ ಕಣ್ಣುಗಳನ್ನು ದಾನವಾಗಿ ಕೊಡುವುದರೊಂದಿಗೆ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

Read More

Karnataka Rain |  ಇನ್ನೆರಡು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ !

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Malenadu Rain | ಕಳೆದ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲೆಲ್ಲಿ ಎಷ್ಟು ಪ್ರಮಾಣದ ಮಳೆ ಸುರಿದಿದೆ ?

ಹಿರಿಯ ಪತ್ರಕರ್ತ, ಸಹಕಾರಿ ಧುರೀಣ ಎಸ್.ಜಿ.ರಂಗನಾಥ ಇನ್ನಿಲ್ಲ !

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]