KALASA : ನೋಡ ನೋಡುತ್ತಿದ್ದಂತೆ ಕಣ್ಣೆದುರೇ ನೀರುಪಾಲಾದ ಎಮ್ಮೆ !

Written by malnadtimes.com

Published on:

KALASA | ಕಾಫಿನಾಡಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ನಡುವೆ ಎಮ್ಮೆಯೊಂದು ಹಳ್ಳ ದಾಟಲು ಹೋಗಿ ವ್ಯಕ್ತಿಯೊಬ್ಬರ ಕಣ್ಣೆದುರೇ ನೀರುಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮಾವಿನಹೊಲದಲ್ಲಿ ಶನಿವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now

SAGARA :ಶಂಕಿತ ಡೆಂಘೀಗೆ 06 ವರ್ಷದ ಬಾಲಕ ಬಲಿ !

ಭಾರಿ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಈ ನಡುವೆ ಇಲ್ಲೋರ್ವ ವ್ಯಕ್ತಿ ತನ್ನ ಮೊಬೈಲ್ ನಿಂದ ಉಕ್ಕಿ ಹರಿಯುತ್ತಿರುವ ನದಿಯ ವಿಡಿಯೋ ಮಾಡುತ್ತಿರುವ ವೇಳೆ ಎಮ್ಮೆಯೊಂದು ಹಳ್ಳ ದಾಟಲು ಯತ್ನಿಸಿದೆ. ಈ ವೇಳೆ ಅಲ್ಲಿದ್ದ ವ್ಯಕ್ತಿ ಎಮ್ಮೆಯನ್ನು ಹಳ್ಳ ದಾಟದಂತೆ ತಡೆಯಲು ಯತ್ನಿಸಬಹುದಿತ್ತು ಆದರೆ ಆತ ವಿಡಿಯೋ ಮಾಡುವುದರಲ್ಲೇ ಬ್ಯುಸಿಯಾಗಿದ್ದ ಅತ್ತ ಎಮ್ಮೆ ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ವ್ಯಕ್ತಿಯ ಕಣ್ಣೆದುರೇ ನೀರುಪಾಲಾಗಿದೆ. ಈ ದೃಶ್ಯ ಆತನ ಮೊಬೈಲ್ ನಲ್ಲಿ ಸೆರೆಯಾಗಿದೆ.

ಒಂದು ವೇಳೆ ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಸಮಯ ಪ್ರಜ್ಞೆ ಮೆರೆದಿದ್ದರೆ ಎಮ್ಮೆಯ ಜೀವ ಉಳಿಸಬಹುದಿತ್ತು.

ಜನಪ್ರತಿನಿಧಿಗಳ ನಿರ್ಲಕ್ಷ್ಯ, ಈ ಗ್ರಾಮಸ್ಥರ ಸಮಸ್ಯೆಗೆ ಮುಕ್ತಿಯೆಂದು ?

Leave a Comment