Chikmagaluru News

KALASA : ನೋಡ ನೋಡುತ್ತಿದ್ದಂತೆ ಕಣ್ಣೆದುರೇ ನೀರುಪಾಲಾದ ಎಮ್ಮೆ !

KALASA | ಕಾಫಿನಾಡಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ನಡುವೆ ಎಮ್ಮೆಯೊಂದು ಹಳ್ಳ ದಾಟಲು ಹೋಗಿ ವ್ಯಕ್ತಿಯೊಬ್ಬರ ಕಣ್ಣೆದುರೇ ನೀರುಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮಾವಿನಹೊಲದಲ್ಲಿ ಶನಿವಾರ ನಡೆದಿದೆ.

WhatsApp Group Join Now
Telegram Group Join Now
Instagram Group Join Now

SAGARA :ಶಂಕಿತ ಡೆಂಘೀಗೆ 06 ವರ್ಷದ ಬಾಲಕ ಬಲಿ !

ಭಾರಿ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಈ ನಡುವೆ ಇಲ್ಲೋರ್ವ ವ್ಯಕ್ತಿ ತನ್ನ ಮೊಬೈಲ್ ನಿಂದ ಉಕ್ಕಿ ಹರಿಯುತ್ತಿರುವ ನದಿಯ ವಿಡಿಯೋ ಮಾಡುತ್ತಿರುವ ವೇಳೆ ಎಮ್ಮೆಯೊಂದು ಹಳ್ಳ ದಾಟಲು ಯತ್ನಿಸಿದೆ. ಈ ವೇಳೆ ಅಲ್ಲಿದ್ದ ವ್ಯಕ್ತಿ ಎಮ್ಮೆಯನ್ನು ಹಳ್ಳ ದಾಟದಂತೆ ತಡೆಯಲು ಯತ್ನಿಸಬಹುದಿತ್ತು ಆದರೆ ಆತ ವಿಡಿಯೋ ಮಾಡುವುದರಲ್ಲೇ ಬ್ಯುಸಿಯಾಗಿದ್ದ ಅತ್ತ ಎಮ್ಮೆ ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ವ್ಯಕ್ತಿಯ ಕಣ್ಣೆದುರೇ ನೀರುಪಾಲಾಗಿದೆ. ಈ ದೃಶ್ಯ ಆತನ ಮೊಬೈಲ್ ನಲ್ಲಿ ಸೆರೆಯಾಗಿದೆ.

ಒಂದು ವೇಳೆ ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಸಮಯ ಪ್ರಜ್ಞೆ ಮೆರೆದಿದ್ದರೆ ಎಮ್ಮೆಯ ಜೀವ ಉಳಿಸಬಹುದಿತ್ತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಜನಪ್ರತಿನಿಧಿಗಳ ನಿರ್ಲಕ್ಷ್ಯ, ಈ ಗ್ರಾಮಸ್ಥರ ಸಮಸ್ಯೆಗೆ ಮುಕ್ತಿಯೆಂದು ?

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]