ತೀರ್ಥಹಳ್ಳಿ ; ಕಾಂತಾರ ಚಾಪ್ಟರ್ 1 ಸಿನಿಮಾದ ಕಲಾವಿದ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿಯ ಆಗುಂಬೆ ಹೋಂಸ್ಟೇನಲ್ಲಿ ನಡೆದಿದೆ.
ಮೃತರನ್ನು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ವಿ.ಕೆ ಎಂದು ಗುರುತಿಸಲಾಗಿದೆ. ಇವರು ಕಾಂತಾರ ಸಿನಿಮಾದ ಶೂಟಿಂಗ್ ನಲ್ಲಿ ಭಾಗವಹಿಸಲು ಬಂದು ಆಗುಂಬೆ ಹೋಂಸ್ಟೇನಲ್ಲಿ ತಂಗಿದ್ದರು. ಆದರೆ ಇದ್ದಕ್ಕಿದ್ದಂತೆ ನಿನ್ನೆ ರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದೆ. ಕೇರಳದಿಂದ ಕುಟುಂಬಸ್ಥರು ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಗೂ ಕಾಂತಾರ ಸಿನಿಮಾದಲ್ಲಿ ನಟಿಸುತ್ತಿದ್ದ ರಾಕೇಶ್ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದೀಗ ಕಾಂತಾರ ಚಲನಚಿತ್ರದ ಮತ್ತೋರ್ವ ಮೃತಪಟ್ಟಿದ್ದು ಚಿತ್ರ ತಂಡಕ್ಕೂ ಅಭಿಮಾನಿಗಳಿಗೆ ಶಾಕ್ ಉಂಟಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.