ಸಾಗರ : ಜೋಗ್ ಫಾಲ್ಸ್ನಲ್ಲಿ ಆತ್ಮಹತ್ಯೆ ಮಾಡಲು ಬಂದಿದ್ದ ಒಬ್ಬ ವ್ಯಕ್ತಿಯನ್ನು, ಕಾರ್ಗಲ್ ಪೊಲೀಸ್ ಠಾಣೆಯ ಪಿಎಸ್ಐ ಅವರ ಜಾಗರೂಕತೆ ಹಾಗೂ ಮನವೊಲಿಸಿದ ಪಾರು ಮಾಡಿರುವ ಘಟನೆ ನಡೆದಿದೆ.
ಮಾಹಿತಿಯಂತೆ, ಬೆಂಗಳೂರಿನ ನಿವಾಸಿ ಒಬ್ಬ ವ್ಯಕ್ತಿ ತೀವ್ರ ಜಿಗುಪ್ಸೆಯಿಂದ ಜೋಗ್ ಫಾಲ್ಸ್ಗೆ ಬಂದು ಆತ್ಮಹತ್ಯೆಗೆ ಮುಂದಾಗಿದ್ದ. ಈ ಬಗ್ಗೆ ಮಾಹಿತಿ ತಿಳಿದ ಕಾರ್ಗಲ್ ಠಾಣೆಯ ಪಿಎಸ್ಐ ಸ್ಥಳಕ್ಕೆ ಧಾವಿಸಿ, ಆ ವ್ಯಕ್ತಿಗೆ ಧೈರ್ಯ ತುಂಬಿ, ಆತ್ಮಹತ್ಯೆ ತೀವ್ರ ಸಮಸ್ಯೆಗೆ ಪರಿಹಾರವಲ್ಲ ಎಂದು ಮನವೊಲಿಸಿದರು.
ಅಲ್ಲದೆ, ಅವರು ಆತನ ಪೋಷಕರನ್ನು ಫೋನ್ ಮೂಲಕ ಸಂಪರ್ಕಿಸಿ ವಿಷಯ ತಿಳಿಸಿ, ಮಗ ಸುರಕ್ಷಿತವಾಗಿರುವುದನ್ನು ಖಚಿತಪಡಿಸಿದರು. ನಂತರ ಸೂಕ್ತ ಕ್ರಮ ಕೈಗೊಂಡು, ಆ ವ್ಯಕ್ತಿಯನ್ನು ವಾಪಸ್ ಬೆಂಗಳೂರಿನ ಅವನ ಮನೆಗೆ ಸುರಕ್ಷಿತವಾಗಿ ಕಳುಹಿಸಲಾಯಿತು.
ಸ್ಥಳೀಯರು ಹಾಗೂ ಸಾರ್ವಜನಿಕರು ಪಿಎಸ್ಐ ಮಾನವೀಯ ಸೇವೆಯನ್ನು ಶ್ಲಾಘಿಸಿದ್ದಾರೆ. ಆತ್ಮಹತ್ಯೆ ತಡೆಗಟ್ಟುವಲ್ಲಿ ಹಾಗೂ ಒಂದು ಕುಟುಂಬವನ್ನು ದುಃಖದಿಂದ ಉಳಿಸುವಲ್ಲಿ ಪೊಲೀಸರ ತ್ವರಿತ ಪ್ರತಿಕ್ರಿಯೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತವಾಗಿದೆ.
ಲಿಂಗನಮಕ್ಕಿ ಜಲಾಶಯ: 7 ಗೇಟ್ ತೆರೆದು 15,000 ಕ್ಯೂಸೆಕ್ ನೀರು ನದಿಗೆ ಬಿಡುಗಡೆ : ಮೈದುಂಬಿದ ಜೋಗ ಜಲಪಾತ
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650