Karnataka Rain:ಮೂರು ದಿನ ಭಾರೀ ಮಳೆಯ ಮುನ್ಸೂಚನೆ: 10 ಜಿಲ್ಲೆಗಳಿಗೆ ರೆಡ್ ಅಲರ್ಟ್

Written by Koushik G K

Published on:

Karnataka Rain:ಮುಂಗಾರು ಮಳೆ ಮತ್ತೆ ಆರ್ಭಟಿಸಲು ಸಜ್ಜಾಗಿದ್ದು, ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜೂನ್ 12ರಿಂದ ಮುಂದಿನ ಮೂರು ದಿನಗಳವರೆಗೆ ಮಳೆಯ ಪ್ರಮಾಣ ಏರಿಕೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಥವಾ ಆರೆಂಜ್ ಅಲರ್ಟ್ ನೀಡಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮುಂಬರುವ ದಿನಗಳಲ್ಲಿ ಕರ್ನಾಟಕದ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 115 ಮಿ.ಮೀ ಅಥವಾ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಇದರಲ್ಲಿ ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಉಡುಪಿ, ಹಾಸನ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳೂ ಸೇರಿವೆ.

ಜೂನ್ 13 ರಂದು ಈ ಜಿಲ್ಲೆಗಳಿಗೆ ರೆಡ್ ಅಲರ್ಟ್:

  • ಉತ್ತರ ಕನ್ನಡ
  • ದಕ್ಷಿಣ ಕನ್ನಡ
  • ಉಡುಪಿ
  • ಕೊಡಗು
  • ಹಾಸನ
  • ಚಿಕ್ಕಮಗಳೂರು
  • ಶಿವಮೊಗ್ಗ
  • ಹಾವೇರಿ
  • ಧಾರವಾಡ
  • ಬೆಳಗಾವಿ

ಈ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ. 110-200 ಮಿ.ಮೀ ಮಳೆಯ ಪ್ರಮಾಣ ದಾಖಲಾಗಬಹುದು ಎಂದು ಮುನ್ಸೂಚಿಸಲಾಗಿದೆ.

ಇತ್ತೀಚೆಗೆ ಒಂದು ವಾರ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ಇದೀಗ ಮತ್ತೆ ವರುಣನ ಆರ್ಭಟ ಆರಂಭವಾಗುತ್ತಿದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರಾರಂಭವಾದರೂ ಕಡಿಮೆ ಮಳೆಯಾಯಿತು. ಆದರೆ ಈಗ ಮಳೆಯ ಅಬ್ಬರ ನಿರೀಕ್ಷಿಸಲಾಗಿದೆ.

Read More

ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗು ಮಾನದಂಡವೇನು ಇಲ್ಲಿದೆ ಮಾಹಿತಿ

PMFBY:ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

SSC ನೇಮಕಾತಿ 2025: ಒಟ್ಟು 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ !

Leave a Comment