Featured ಶಿವಮೊಗ್ಗ

Karnataka rain : ಜೂನ್ 11ರಿಂದ ರಾಜ್ಯದಲ್ಲಿ ಮತ್ತೆ ಅಬ್ಬರಿಸಲಿರುವ ಮುಂಗಾರು ಮಳೆ ! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Karnataka rain :ಮೇ ತಿಂಗಳ ಕೊನೆಯ ವಾರದಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಆದರೆ ಜೂನ್ ತಿಂಗಳಲ್ಲಿ ಮಳೆಯ ಪ್ರಮಾಣ ಸಂಪೂರ್ಣವಾಗಿ ಕಡಿಮೆಯಾಗಿರುವುದು ಕಂಡು ಬಂದಿದೆ. ಮೋಡ ಕವಿದ ವಾತಾವರಣ ಹಿನ್ನಡೆಯಾದ ನಂತರ ರಾಜ್ಯದಲ್ಲಿ ಬಿಸಿಲು ಕಾಣಿಸಿಕೊಂಡಿದೆ. ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಮುಂಗಾರು ಮಳೆಯ ಪ್ರಮಾಣವು ಜೋರಾಗಿದೆ.

ಹವಾಮಾನ ಇಲಾಖೆ ಈ ತಿಂಗಳ ಎರಡನೇ ವಾರದಲ್ಲಿ ಭಾರಿ ಮಳೆ ಬೀರುವ ಮುನ್ಸೂಚನೆ ನೀಡಿದೆ.ಜೂನ್ 11 ರಿಂದ ಭಾರಿ ಮಳೆಯ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಹವಾಮಾನ ಇಲಾಖೆ ಕಲ್ಪನೆಯ ಪ್ರಕಾರ, ಜೂನ್ 7ರಿಂದ ರಾಜ್ಯದಲ್ಲಿ ಮಳೆ ಹಂತ ಹಂತವಾಗಿ ಹೆಚ್ಚಾಗಲಿದೆ. ಬಿರು ಗಾಳಿಯೊಂದಿಗೆ ಸುಧಾರಿತ ಪ್ರಮಾಣದಲ್ಲಿ ಮಳೆ ಸುರಿಯುವ ಸೂಚನೆ ನೀಡಲಾಗಿದೆ. ಪ್ರತಿ ಗಂಟೆಗೆ 40-50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ.

ಜೂನ್ 11ರಂದು ಬಳ್ಳಾರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 12ರಂದು ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ, ಜೊತೆಗೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಸಹ ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ. ಉತ್ತರ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಜೂನ್ 7 ಮತ್ತು 8ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ, ಇನ್ನಿತರೆ 28 ಜಿಲ್ಲೆಗಳಲ್ಲಿ ಪ್ರಾಯಶಃ ಹಗುರ ಹಾಗೂ ಸಾಧಾರಣ ಮಳೆಯಾಗಲಿದೆ. ಮುಂದಿನ ದಿನಗಳಲ್ಲಿ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Read More

Good News : ರಾಜ್ಯದ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ, ಬಾಳೆಹಣ್ಣು ವಿತರಣೆ !

ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಶೀಘ್ರವೇ ಪಡಿತರ ಚೀಟಿ ಸಮೀಕ್ಷೆ!

Leave a Comment