Karanataka Rain | ಇಂದು ಬೆಳಗ್ಗೆಯಿಂದ ಶಿವಮೊಗ್ಗ ಜಿಲ್ಲಾದ್ಯಂತ ಜೋರು ಮಳೆಯಾಗುತ್ತಿದ್ದು ಮಳೆಗಾಗಿ ಆಗಸದ ಕಡೆ ನೋಡುತ್ತಿದ್ದ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿಸಿದೆ.
ಇನ್ನೂ ಹೈನುಗಾರಿಕೆ, ಕೃಷಿ ಬಳಕೆಗೆ ಹಾಗೂ ಕುಡಿಯುವ ನೀರಿಲ್ಲದೆ ಪರಿತಪಿಸುತ್ತಿದ್ದ ಜನ ನಿಟ್ಟುಸಿರು ಬಿಡುವಂತಾಗಿದೆ.
ಕಳೆದ 15 ದಿನಗಳ ಹಿಂದೆ ಗುಡುಗು ಸಿಡಿಲಾರ್ಭಟದಿಂದ ಬಂದ ಮಳೆಯಿಂದಾಗಿ ಒಣ ಹೋಗಿದ್ದ ಅಡಿಕೆ ತೋಟ, ಶುಂಠಿ ಬೇಸಿಗೆ ಭತ್ತದ ಬೆಳೆ, ಅಂತರ್ಜಲ ಇಲ್ಲದೆ ತಳ ಕಂಡ ಬೋರ್ವೆಲ್, ತೆರೆದ ಬಾವಿಗಳಲ್ಲಿ ನೀರು ತುಂಬಿ ರೈತರಲ್ಲಿ ಹರ್ಷ ಮೂಡುವಂತೆ ಮಾಡಿದೆ.

ಕಳೆದ ವರ್ಷದ ಆಗಸ್ಟ್ – ಸೆಪ್ಟಂಬರ್ ತಿಂಗಳಿಂದ ಮಳೆಯಿಲ್ಲದೆ ಭತ್ತದ ಬೆಳೆ, ಅಡಿಕೆ, ಮುಸುಕಿನಜೋಳ, ಬಾಳೆ, ಕಬ್ಬು, ಕಾಳುಮೆಣಸು ಸೇರಿದಂತೆ ಇನ್ನಿತರ ಬೆಳೆ ಕೈಗೆ ಸಿಗುತ್ತದೋ ಇಲ್ಲವೋ ಎಂಬ ಚಿಂತೆಯಲ್ಲಿ ಅಲ್ಪಸ್ವಲ್ಪ ಬಂದ ಬೆಳೆಯನ್ನು ಕಟಾವು ಮಾಡಿಕೊಂಡು ರೈತರು ಬೆಲೆ ಇಲ್ಲದೆ ಸಾಕಷ್ಟು ಸಂಕಷ್ಟ ಸ್ಥಿತಿ ಎದುರಿಸುವಂತಾಗಿದ್ದು ಬೇಸಿಗೆಯ ರಣ ಬಿಸಿಲಿನಿಂದಾಗಿ ಬೆಳೆ ಉಳಿಸಿಕೊಳ್ಳುವ ಕೆಲಸದಲ್ಲಿ ಹರಸಾಹಸ ಪಡುವಂತಾಗಿದ್ದು ಈಗ್ಗೆ ಹದಿನೈದು ದಿನಗಳ ಹಿಂದೆ ಬಂದ ಮಳೆಯಿಂದಾಗಿ ರೈತಾಪಿವರ್ಗ ನಿಟ್ಟುಸಿರು ಬಿಟ್ಟಿದ್ದರು.
ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿದ್ದು ನಂತರ ಜೋರು ಮಳೆ ಸುರಿಯುತ್ತಿರುವುದನ್ನು ಕಂಡ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
Read More
ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರ ನಿವಾಸಕ್ಕೆ ನಟ ಶಿವರಾಜಕುಮಾರ್ ಅಭಿಮಾನಿಗಳ ಮುತ್ತಿಗೆ!
Rain Damage | ಬಿರುಗಾಳಿ ಸಹಿತ ಮಳೆ, ಮನೆ ಮೇಲೆ ಮರ ಬಿದ್ದು ಹಾನಿ
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ, ಹೊರಜಿಗಿದು ಪ್ರಾಣ ಉಳಿಸಿಕೊಂಡ ಪ್ರಯಾಣಿಕರು !
Accident | ಕಾರು ಮತ್ತು ಓಮ್ನಿ ನಡುವೆ ಭೀಕರ ಅಪಘಾತ, ಓರ್ವ ಸ್ಥಳದಲ್ಲಿಯೇ ಸಾವು !

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.