Karnataka Rain

Karnataka Rain | ರಾಜ್ಯದ ಹಲವೆಡೆ ಇಂದು ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

Karnataka Rain | ಕರಾವಳಿ (Karavali) ಮತ್ತು ಮಲೆನಾಡು (Malenadu) ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರೀ ಮಳೆ (Heavy Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

Read More:Black Pepper Price | 6 ವರ್ಷಗಳ ಬಳಿಕ ಕಾಳುಮೆಣಸಿನ ದರದಲ್ಲಿ ಭಾರಿ ಏರಿಕೆ, ಬೆಳೆಗಾರರು ಹರ್ಷ

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಗಂಟೆಗೆ 55-66 ಕಿ.ಮೀ ವೇಗದ ಸುಳಿಗಾಳಿ ಪರಿಣಾಮದಿಂದಾಗಿ ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇಂದು ಉತ್ತರ ಕರ್ನಾಟಕದ ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

karnataka rain

ಇನ್ನೂ ಬಾಗಲಕೋಟೆ, ವಿಜಯಪುರ, ಬಳ್ಳಾರಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಏನಿದು ಅಲರ್ಟ್ ?

  • 204 ಮಿ.ಮೀ.ಗಿಂತ ಅಧಿಕ ಮಳೆ ಬೀಳುವ ಮೂನ್ಸೂಚನೆ ಇದ್ದರೆ ರೆಡ್ ಅಲರ್ಟ್.
  • 115 ರಿಂದ 204 ಮಿ.ಮೀ.ವರೆಗೆ ಮಳೆಯಾಗುವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.
  • 64 ರಿಂದ 115 ಮಿ.ಮೀ. ಮಳೆ ಸುರಿಯುವ ಸಂಭವವಿದ್ದರೆ ಆ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್.

Read More:ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 30ಕ್ಕೂ ಹೆಚ್ಚು ಮಂದಿಗೆ ಗಾಯ !

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>