Karnataka Rain : ಕರ್ನಾಟಕದಲ್ಲಿ ಮುಂಗಾರು ಪ್ರಾರಂಭವಾದ ನಂತರ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮುಂಗಾರು ಪೂರ್ವ ಮಳೆಯ ಅಬ್ಬರವೇ ಹೆಚ್ಚಿದ್ದು, ಕಳೆದ ಎರಡು ದಿನಗಳಿಂದ ಮುಂಗಾರು ಮಳೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ತುಸು ಮಳೆಯಾಗಿತ್ತು , ಆದರೆ ಈಗ ಕರಾವಳಿ ಹೊರತುಪಡಿಸಿ ಉಳಿದ ಎಲ್ಲಾ ಪ್ರದೇಶಗಳಲ್ಲೂ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಹಾಗೂ ಅಲ್ಲಲ್ಲಿ ಭಾರಿ ಮಳೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕಳೆದ 8-10 ದಿನಗಳಲ್ಲಿ ರಾಜ್ಯದಲ್ಲಿ ಅಬ್ಬರವಾಗಿದ್ದ ಮಳೆ ಈಗ ಬ್ರೆಕ್ ನೀಡಿದ್ದಾನೆ. ಜೂನ್ 25 ರವರೆಗೆ ವರುಣ ವಿರಾಮ ಕೊಡಲಿದ್ದು, ಸಾಧಾರಣ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ವಿಜಯನಗರದಲ್ಲಿ ಜೂನ್ 25 ರವರೆಗೆ ಸಾಧಾರಣ ಮಳೆ ಆಗಲಿದೆ.

