HOSANAGARA ; ತಾಲ್ಲೂಕಿನ ಮಾಸ್ತಿಕಟ್ಟೆ ಯಡೂರು ಗ್ರಾಮ ಪಂಚಾಯಿತಿ ಕವರಿಯಿಂದ ಕೋಳೂರು ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿದ್ದು ಈ ರಸ್ತೆಗೆ ಡಾಂಬರೀಕರಣ ಮಾಡದಿದ್ದರೆ ಮುಂಬರುವ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕರಿಸುವುದಾಗಿ ಅಲ್ಲಿನ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಕವರಿಯಿಂದ ಕೋಳೂರು ಗ್ರಾಮಕ್ಕೆ ಸುಮಾರು 2 ಕಿ.ಮೀ. ರಸ್ತೆ ಸಂಪೂರ್ಣ ಹಾಳಾಗಿದ್ದು ಇಲ್ಲಿನ ಗ್ರಾಮ ಪಂಚಾಯತಿ ಆಡಳಿತ ವರ್ಗ ಈ ರಸ್ತೆಗೆ ಬರೀ ಮಣ್ಣು ಹಾಕಿ ಹಣ ಬಿಡುಗಡೆ ಮಾಡಿಕೊಳ್ಳುತ್ತಿದ್ದರೆಯೇ ಹೊರತು ಇಲ್ಲಿನ ನಿವಾಸಿಗಳಿಗೆ ಓಡಾಟದ ದೃಷ್ಠಿಯಿಂದ ರಸ್ತೆ ನಿರ್ಮಾಣ ಮಾಡುತ್ತಿಲ್ಲ. ಈ ರಸ್ತೆಗೆ ಪುರಾತನ ಕಾಲದ ಇತಿಹಾಸವಿದೆ. ತೀರ್ಥಹಳ್ಳಿ ಕ್ಷೇತ್ರಕ್ಕೆ ಸೇರುವ ಈ ರಸ್ತೆ, ಅಭ್ಯರ್ಥಿಗಳು ಚುನಾವಣೆಯ ಸಂದರ್ಭದಲ್ಲಿ ಬಂದು ಓಟು ಕೇಳುವಾಗ ನಾನು ಗೆದ್ದರೆ ಖಂಡಿತ ರಸ್ತೆ ರಿಪೇರಿ ಮಾಡಿಸಿಕೊಡುತ್ತೇವೆ ಎಂದು ಹೋಗುತ್ತಾರೆ. ಗೆದ್ದ ಮೇಲೆ ಈ ಕಡೆ ಮುಖ ಹಾಕದಿರುವುದು ವಿಪರ್ಯಾಸ. ಮುಂದಿನ ಚುನಾವಣೆಯಲ್ಲಿ ಮತ್ತೆ ಓಟು ಕೇಳಲು ರಾಜಕೀಯ ನಾಯಕರು ಬರುತ್ತಾರೆ. ಈಗಾಗಲೇ 10 ವಿಧಾನಸಭಾ ಚುನಾವಣೆ ನಡೆದರೂ ಬರೀ ಆಶ್ವಾಸನೆಯಾಗಿಯೇ ಉಳಿದಿದ್ದು ರಸ್ತೆ ರಿಪೇರಿ ಮಾಡಿಕೊಡದೇ ಹೋದಲ್ಲಿ ಮುಂದೆ ನಡೆಯುವ ಎಲ್ಲ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಅಲ್ಲಿನ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteMay 31, 2025ಜೂ. 4ಕ್ಕೆ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ
HosanagaraMay 31, 2025ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
HosanagaraMay 30, 2025ಕೋವಿಡ್ ಕುರಿತು ಜಾಗೃತಿ ವಹಿಸಿ ; ಅಧಿಕಾರಿಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ
Crime NewsMay 30, 2025ಯುವಕನ ಜೊತೆ ಎರಡು ಮಕ್ಕಳ ಮಹಿಳೆ ಲವ್ವಿಡವ್ವಿ ; ಸಾವಿನಲ್ಲಿ ಅಂತ್ಯಕಂಡ ಪ್ರೇಮ್ ಕಹಾನಿ !