ರಿಪ್ಪನ್ಪೇಟೆ: ಈ ಬಾರಿಯ ಮಳೆಗಾಲದ ಕೆಂಚನಾಲ ಮಾರಿಕಾಂಬ ಜಾತ್ರೆ ಭಕ್ತಸಾಗರದೊಂದಿಗೆ ಅತ್ಯಂತ ಭಕ್ತಿ ಭಾವಪೂರ್ಣವಾಗಿ ಮಂಗಳವಾರ ನಡೆಯಿತು.
ಈ ಜಾತ್ರೆಗೆ ಜಿಲ್ಲೆ, ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸಹ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.
ವರ್ಷಕ್ಕೆ ಎರಡು ಬಾರಿ ನಡೆಯುವ ಈ ಜಾತ್ರೆ ಮಳೆಗಾಲದಲ್ಲಿ ಮಂಗಳವಾರ ಮತ್ತು ಬೇಸಿಗೆಯಲ್ಲಿ ಬುಧವಾರ ಕೆಂಚನಾಲ ಗ್ರಾಮದಲ್ಲಿ ಜಾತ್ರೆ ನಡೆಯುತ್ತದೆ. ಜನಜೀವನದ ಒಂದು ಮೂಲಭೂತ ಭಾಗವಾಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಮಾರಿಕಾಂಬ ದೇವಾಲಯವು ಗ್ರಾಮೀಣ ಹಾಗೂ ನಗರ ಪ್ರದೇಶದ ಜನರ ಭಕ್ತಿ-ಶ್ರದ್ಧೆಗಳ ಪ್ರಮುಖ ಕೇಂದ್ರವಾಗಿದೆ.

ಭಕ್ತರ ನಡುವೆ ದೇವಿಯ ಬಗ್ಗೆ ಅಚಲವಾದ ನಂಬಿಕೆ ಇದೆ. ಅವರು ಮಾಡಿದ ಹರಕೆಗಳು ದೇವಿಯ ಕೃಪೆಯಿಂದ ಈಡೇರುತ್ತವೆ ಎಂಬ ನಂಬಿಕೆಯಿಂದ ಕೃಷಿಯ ರಕ್ಷಣೆ, ಆರೋಗ್ಯ ಸಮಸ್ಯೆಗಳಿಂದ ಮುಕ್ತಿ, ಕುಟುಂಬದ ನೆಮ್ಮದಿ ಹಾಗೂ ಸಮಾಜದಲ್ಲಿ ಶಾಂತಿಗಾಗಿ ದೇವಿಗೆ ಹರಕೆ ಮಾಡುತ್ತಾರೆ. ಈ ಹರಕೆ ಈಡೇರುವ ಹಿನ್ನೆಲೆಯಲ್ಲಿ ಭಕ್ತರು ದೇವಾಲಯಕ್ಕೆ ಹಣ್ಣು-ಹಂಪಲುಗಳು ಹಾಗೂ ಕೋಳಿ, ಕುರಿಗಳನ್ನು ನೀಡುವ ಸಂಪ್ರದಾಯವಿದೆ.
ಮುಜರಾಯಿ ಇಲಾಖೆಯ ಮೇಲುಸ್ತುವಾರಿಯಲ್ಲಿ ದೇವಸ್ಥಾನ ಸಮಿತಿ ಹಾಗೂ ಗ್ರಾಮ ಪಂಚಾಯತಿಯ ಸಹಕಾರದಿಂದ ಜಾತ್ರೆ ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಇಂದು ಮುಂಜಾನೆಯಿಂದಲೇ ಸುರಿಯುತ್ತಿದ್ದ ಜಿಟಿಜಿಟಿ ಮಳೆಯ ನಡುವೆಯೂ ವಯೋವೃದ್ಧರು, ಮಹಿಳೆಯರು, ಪುರುಷರು, ಯುವಕರು ಹಾಗೂ ಮಕ್ಕಳು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತು ಭಕ್ತಿಭಾವದಿಂದ ದರ್ಶನ ಪಡೆದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.