Hosanagara

ಕೊಡಚಾದ್ರಿ ಬೆಟ್ಟದಿಂದ ಆಯತಪ್ಪಿ ಬಿದ್ದ ಪ್ರವಾಸಿಗ: ಜೀಪ್ ಚಾಲಕರ ಸಮಯಪ್ರಜ್ಞೆಯಿಂದ ಉಳಿದ ಜೀವ

ಕೊಡಚಾದ್ರಿ ಬೆಟ್ಟದಿಂದ ಆಯತಪ್ಪಿ ಬಿದ್ದ ಪ್ರವಾಸಿಗ: ಜೀಪ್ ಚಾಲಕರ ಸಮಯಪ್ರಜ್ಞೆಯಿಂದ ಜೀವ ಉಳಿಯಿತು – mt odchadti

ಶಿವಮೊಗ್ಗ: ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕೊಡಚಾದ್ರಿ ಬೆಟ್ಟದಲ್ಲಿ ಆಯತಪ್ಪಿ ಕೆಳಗೆ ಬಿದ್ದ ಪ್ರವಾಸಿಗನನ್ನು ಸ್ಥಳೀಯ ಜೀಪ್ ಚಾಲಕರು ರಕ್ಷಿಸಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಕುಮುಟಾ ಮೂಲದ ಪ್ರದೀಪ್ ಎಂಬುವವರು ಗಾಯಗೊಂಡ ಪ್ರವಾಸಿಗ. ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸಕ್ಕೆ ಬಂದಿದ್ದ ಅವರು, ಶಂಕರಾಚಾರ್ಯ ಪೀಠದ ಸಮೀಪ ತೆರಳುವಾಗ ತಲೆಸುತ್ತಿನಿಂದ ಆಯತಪ್ಪಿ ಸುಮಾರು 60 ಅಡಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಗಮನಿಸಿದ ಪ್ರವಾಸಿಗರು ತಕ್ಷಣವೇ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಸ್ಥಳದಲ್ಲಿದ್ದ ಕೊಲ್ಲೂರು, ನಿಟ್ಟೂರು ಹಾಗೂ ಸಂಪೆಕಟ್ಟೆ ಭಾಗದ ಪ್ರವಾಸಿ ಜೀಪ್ ಚಾಲಕರು ಸಮಯಪ್ರಜ್ಞೆ ಮೆರೆದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಕಷ್ಟಕರವಾದ ಬೆಟ್ಟ ಪ್ರದೇಶದಲ್ಲಿಯೇ ಜೀಪ್ ಚಾಲಕರು ತಕ್ಷಣ ಕಾರ್ಯಪ್ರವೃತ್ತರಾಗಿ ಪ್ರದೀಪ್ ಅವರನ್ನು ಸುರಕ್ಷಿತವಾಗಿ ಮೇಲಕ್ಕೆ ತಂದು ರಕ್ಷಿಸಿದ್ದಾರೆ. ಬಳಿಕ ಗಾಯಗೊಂಡ ಪ್ರವಾಸಿಗರನ್ನು ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಪ್ರದೀಪ್ ಅವರ ತಲೆ, ಕೈ ಮತ್ತು ಕಾಲು ಭಾಗದಲ್ಲಿ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಜೀಪ್ ಚಾಲಕರ ತ್ವರಿತ ಸ್ಪಂದನೆಯಿಂದ ದೊಡ್ಡ ಅನಾಹುತ ತಪ್ಪಿದೆ.

ಘಟನೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650