ರಿಪ್ಪನ್ಪೇಟೆ ; ಕೋಣಂದೂರು ಪಾರ್ವತಮ್ಮ ರೇವಣಪ್ಪ (86) ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರಿಗೆ ಉದ್ಯಮಿ, ಕೊಡಗೈದಾನಿ ಕೆ.ಆರ್.ಪ್ರಕಾಶ್ ಸೇರಿದಂತೆ ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.
ಸಂತಾಪ ;
ಕೊಡುಗೈದಾನಿ ಪಾರ್ವತಮ್ಮನವರ ನಿಧನಕ್ಕೆ ಆನಂದಪುರ ಮುರುಘಾರಾಜೇಂದ್ರ ಸಂಸ್ಥಾನ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ, ರಂಭಾಪುರಿ ಪೀಠದ ಜಗದ್ಗುರುಗಳು, ಶ್ರೀಶೈಲ, ಉಜ್ಜಯನಿ ಕೇದಾರ ಕಾಶಿ ಜಗದ್ಗುರುಗಳು ಹಾಗೂ ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತರಾದ್ಯ ಶಿವಾಚಾರ್ಯ ಮಹಾಸ್ವಾಮೀಜಿ, ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹಾಗೂ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ, ಕವಲೇದುರ್ಗ ಭುವನಗಿರಿ ಸಂಸ್ಥಾನ ಮಠದ ಮರಳಸಿದ್ದ ಶಿವಾಚಾರ್ಯ ಮಹಾಸ್ವಾಮೀಜಿ, ಅಖಿಲಭಾರತ ವೀರಶೈವ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಎಂ.ಎಸ್.ಉಮೇಶ, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

