ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿ ನಾಪತ್ತೆ, ಮಾಣಿ ಡ್ಯಾಂನಲ್ಲಿ ಶೋಧ ಕಾರ್ಯ

Written by Mahesha Hindlemane

Published on:

HOSANAGARA ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯ ಯಡೂರು ಗ್ರಾಮದ ಗೌಟಾಣಿ ವಾಸಿ, ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿ ಭರತ್ (48) ಕಳೆದ ನಾಲ್ಕು ದಿನದಿಂದ ನಾಪತ್ತೆಯಾದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶನಿವಾರ ರಾತ್ರಿ ಸುಮಾರು 9 ಗಂಟೆಗೆ ಮನೆಯಿಂದ ಹೊರಟ ಭರತ್ ವಾಪಾಸ್ ಮನೆಗೆ ಬಂದಿಲ್ಲ. ಮಾಣಿ ಡ್ಯಾಂ ಸಮೀಪ ಭರತ್ ಬೈಕ್ ಕಂಡುಬಂದಿದ್ದು ಜಲಾಶಯ ವ್ಯಾಪ್ತಿಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ತೀರ್ಥಹಳ್ಳಿ ಅಗ್ನಿಶಾಮಕ ದಳ, ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಕೂಡ ಶೋಧಕಾರ್ಯ ನಡೆಸುತ್ತಿದ್ದಾರೆ. ಜಲಾಶಯದ ಬುಡದಲ್ಲಿ 70 ಅಡಿಗೂ ಹೆಚ್ಚು ಆಳವಿದ್ದು ಶೋಧಕಾರ್ಯ ಸವಾಲಾಗಿದೆ.

ಭರತ್ ಕೆಪಿಸಿಯ ವಾರಾಹಿ ಮಾಣಿ ಡ್ಯಾಂನಲ್ಲಿ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ. ಭರತ್ ಗೆ 9 ವರ್ಷದ ಗಂಡು ಮಗು ಇದ್ದು, ಪತ್ನಿ ಪೂರ್ಣೇಶ್ವರಿ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿದ್ದಾರೆ.

ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪತ್ತೆ ಕಾರ್ಯ ಮುಂದುವರೆದಿದೆ.

Leave a Comment