HOSANAGARA ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯ ಯಡೂರು ಗ್ರಾಮದ ಗೌಟಾಣಿ ವಾಸಿ, ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿ ಭರತ್ (48) ಕಳೆದ ನಾಲ್ಕು ದಿನದಿಂದ ನಾಪತ್ತೆಯಾದ ಘಟನೆ ನಡೆದಿದೆ.
ಶನಿವಾರ ರಾತ್ರಿ ಸುಮಾರು 9 ಗಂಟೆಗೆ ಮನೆಯಿಂದ ಹೊರಟ ಭರತ್ ವಾಪಾಸ್ ಮನೆಗೆ ಬಂದಿಲ್ಲ. ಮಾಣಿ ಡ್ಯಾಂ ಸಮೀಪ ಭರತ್ ಬೈಕ್ ಕಂಡುಬಂದಿದ್ದು ಜಲಾಶಯ ವ್ಯಾಪ್ತಿಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ತೀರ್ಥಹಳ್ಳಿ ಅಗ್ನಿಶಾಮಕ ದಳ, ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಕೂಡ ಶೋಧಕಾರ್ಯ ನಡೆಸುತ್ತಿದ್ದಾರೆ. ಜಲಾಶಯದ ಬುಡದಲ್ಲಿ 70 ಅಡಿಗೂ ಹೆಚ್ಚು ಆಳವಿದ್ದು ಶೋಧಕಾರ್ಯ ಸವಾಲಾಗಿದೆ.
ಭರತ್ ಕೆಪಿಸಿಯ ವಾರಾಹಿ ಮಾಣಿ ಡ್ಯಾಂನಲ್ಲಿ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ. ಭರತ್ ಗೆ 9 ವರ್ಷದ ಗಂಡು ಮಗು ಇದ್ದು, ಪತ್ನಿ ಪೂರ್ಣೇಶ್ವರಿ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿದ್ದಾರೆ.
ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪತ್ತೆ ಕಾರ್ಯ ಮುಂದುವರೆದಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.