ಹೊಸನಗರ: ಹುಲಿಕಲ್ ಘಾಟ್ನ ತಿರುವಿನಲ್ಲಿ ಡಿಸೇಲ್ ಖಾಲಿಯಾಗಿದ ಕಾರಣ ಕೆಎಸ್ಆರ್ಟಿಸಿ ಬಸ್ ರಸ್ತೆ ಮಧ್ಯದಲ್ಲಿ ನಿಂತುಹೋಗಿ, ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಶಿವಮೊಗ್ಗ–ಹೊಸನಗರ ಮಾರ್ಗವಾಗಿ ಉಡುಪಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಘಾಟಿಯ ಮುಖ್ಯ ತಿರುವಿನಲ್ಲಿ ಡಿಸೇಲ್ ಖಾಲಿಯಾಗಿ ನಿಂತು ಹೋಗಿದೆ. ಈ ರಸ್ತೆಯು ತೀವ್ರ ತಿರುವು ಮತ್ತು ಕಿರಿದಾದ್ದರಿಂದ, ಬಸ್ ನಿಂತ ಕಡೆ ಇತರೆ ವಾಹನಗಳ ಸಂಚಾರ ಅಸ್ತವ್ಯಸ್ತವಾಯಿತು.

ಕಾರುಗಳು ಮತ್ತು ಸಣ್ಣ ಗೂಡ್ಸ್ ವಾಹನಗಳು ಮಾತ್ರ ಬಸ್ನ ಪಕ್ಕದಿಂದ ಸಾಗಲು ಸಾಧ್ಯವಾಗಿದ್ದು, ದೊಡ್ಡ ವಾಹನಗಳಿಗೆ ತೀವ್ರ ತೊಂದರೆ ಉಂಟಾಯಿತು.
ಡಿಸೇಲ್ ವ್ಯವಸ್ಥೆ ಬಳಿಕ ಸಂಚಾರ ಸುಧಾರಣೆ
ಸಮೀಪದ ಮಾಸ್ತಿಕಟ್ಟೆಯಿಂದ ತುರ್ತು ಡಿಸೇಲ್ ಪೂರೈಕೆ ಮಾಡಲಾಗಿದ್ದು, ಬಸ್ ಮತ್ತೆ ಹೊರಟಿದೆ. ಬಸ್ ನಿಂತಿದ್ದ ಸಮಯದಲ್ಲಿ ವಾಹನ ಸವಾರರು ಹಾಗೂ ಪ್ರಯಾಣಿಕರಿಗೆ ತೀವ್ರ ಸಮಸ್ಯೆಯಾಗಿದ್ದರು ಕಡಿಮೆ ಸಮಯದಲ್ಲಿ ಪರಿಹಾರವಾಗಿದ್ದು ಸ್ವಲ್ಪ ನಿಟ್ಟುಸಿರು ಬಿಡುವಂತಾಯಿತು.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.