ಸೊರಬ : ತಾಲ್ಲೂಕಿನ ಕುಬಟೂರು ಗ್ರಾಮದ ಪ್ರಸಿದ್ಧ ಶ್ರೀ ಚಿಂತಾಮಣಿ ನರಸಿಂಹಸ್ವಾಮಿ ದೇವಾಲಯದಲ್ಲಿ ಪ್ರಾಚೀನ ವಿಗ್ರಹವನ್ನು ಭಗ್ನಗೊಳಿಸಿದ ಘಟನೆ ನಡೆದಿದೆ. ಈ ಕುರಿತು ದೇವಸ್ಥಾನ ಸಮಿತಿಯ ಎನ್. ವೆಂಕಟೇಶ್ ಅವರು ನೀಡಿದ ದೂರಿನ ಆಧಾರದಲ್ಲಿ ಆನವಟ್ಟಿ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ವಿಗ್ರಹವು ಎರಡನೇ ಶತಮಾನಕ್ಕೆ ಸೇರಿದ್ದೆಂದು ತಿಳಿದುಬಂದಿದೆ. ಮಂಗಳವಾರ ಬೆಳಗಿನ ಜಾವ ದೇವಾಲಯದ ಅರ್ಚಕ ವೇಣುಗೋಪಾಲ್ ಆಚಾರ್ ಅವರು ದೈನಂದಿನ ಪೂಜಾ ಕಾರ್ಯಕ್ಕಾಗಿ ದೇವಾಲಯ ಪ್ರವೇಶಿಸಿದಾಗ, ಬಾಗಿಲು ಭಂಗಗೊಂಡಿರುವುದು ಮತ್ತು ದೇವರ ವಿಗ್ರಹ ಬಟ್ಟೆಯಲ್ಲಿ ಆವರಿಸಿಕೊಂಡಿರುವುದು ಗಮನಕ್ಕೆ ಬಂದಿದೆ. ಬಟ್ಟೆ ತೆಗೆಯುತ್ತಿದ್ದಂತೆ, ವಿಗ್ರಹದ ಮುಖಭಾಗ ಭಗ್ನಗೊಂಡಿರುವುದು ಬೆಳಕಿಗೆ ಬಂದಿದೆ.
ಘಟನೆಯ ಸುದ್ದಿ ವೈರಲ್ ಆದ ತಕ್ಷಣ, ಹಿಂದೂ ಜಾಗರಣಾ ವೇದಿಕೆ, ವಿಶ್ವ ಹಿಂದು ಪರಿಷತ್, ಭಜರಂಗದಳದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ದೇವಸ್ಥಾನಕ್ಕೆ ಭೇಟಿ ನೀಡಿ, ಆರೋಪಿಗಳನ್ನು ಶೀಘ್ರ ಬಂಧಿಸಲು ಆಗ್ರಹಿಸಿದರು.

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ
ಸ್ಥಳಕ್ಕೆ ಡಿವೈಎಸ್ಪಿ ಕೆ.ಇ. ಕೇಶವ್ ರಾವ್, ಪಿಎಸ್ಐ ಚಂದನ್ ಛಲವಾದಿ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು. ಘಟನೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರ ಸ್ವಗ್ರಾಮದಲ್ಲಿ ಸಂಭವಿಸಿದ ಕಾರಣ, ಘಟನೆಗೆ ಗಂಭೀರತೆ ಸಿಕ್ಕಿದೆ.
ಪೊಲೀಸರು ಸ್ಥಳೀಯರಿಂದ ಮಾಹಿತಿಯನ್ನು ಸಂಗ್ರಹಿಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಈ ಪರಿಶೀಲನೆಯ ವೇಳೆ, ಹಾನಗಲ್ ತಾಲೂಕಿನ ಗೋಂದಿ ಗ್ರಾಮದ ಕೋಟೇಶಪ್ಪ ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲಿ ವಿಗ್ರಹವನ್ನು ಭಗ್ನಗೊಳಿಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಡಿವಾಳ, ಈಡಿಗ, ಗಂಗಾಮತಸ್ಥರ ಸಮುದಾಯ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಮಂಜೂರು
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.