ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರ ನಿವಾಸಕ್ಕೆ ನಟ ಶಿವರಾಜಕುಮಾರ್‌ ಅಭಿಮಾನಿಗಳ ಮುತ್ತಿಗೆ!

Written by admin

Published on:

Kumar Bangarappa:ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರ ನಿವಾಸಕ್ಕೆ ನಟ ಶಿವರಾಜಕುಮಾರ್‌ ಅಭಿಮಾನಿಗಳು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ರಾಜ್ ಕುಮಾರ್ ಕುಟುಂಬದ ಬಗ್ಗೆ ಕುಮಾರ ಬಂಗಾರಪ್ಪ ಹಗುರಾದ ಮಾತುಗಳು ನೋವು ತಂದಿದ್ದು, ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.ತಕ್ಷಣ ಕುಮಾರ ಬಂಗಾರಪ್ಪ ಅವರ ಮನೆಗೆ ಸಿಆರ್‌ಪಿಎಫ್ ಪಡೆಗಳು ಆಗಮಿಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಮನೆ ಬಾಗಿಲಿನಿಂದ ಹೊರಹೋಗುವಂತೆ ವಾರ್ನಿಂಗ್ ಮಾಡಿದರು.

ಗೀತಾ ಶಿವರಾಜಕುಮಾರ್ ಸೋಲಿನ ನಂತರ, ನಟ ಶಿವರಾಜಕುಮಾರ್ ವಿರುದ್ಧ ವ್ಯಂಗ್ಯವಾಡಿದ ಬಿಜೆಪಿ ಮುಖಂಡ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರ ನಿವಾಸಕ್ಕೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಚುನಾವಣೆ ನಡೆದಿದೆ. ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ, ನಟ ಶಿವರಾಜಕುಮಾರ್ ಪತ್ನಿ ಗೀತಾ ಶಿವರಾಜಕುಮಾರ್ ಮತ್ತು ಬಂಡಾಯ ಅಭ್ಯರ್ಥಿ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದರು.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ ವಿರುದ್ಧ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಗೆಲುವು ಸಾಧಿಸಿದರು.

Read More

ಗೀತಾ, ಮಧು ವಿರುದ್ಧ ಫೇಸ್‌ಬುಕ್‌ನಲ್ಲಿ ಸುಧೀರ್ಘ ಪೋಸ್ಟ್ ಹಾಕಿ ಆಕ್ರೋಶ ಹೊರಹಾಕಿದ ಕುಮಾರ್ !

ಶಿವಮೊಗ್ಗದಲ್ಲಿ ಗೀತಾ ಶಿವರಾಜ್‌ಕುಮಾರ್ ಗೆ ಸೋಲು, ಫಲಿತಾಂಶದ ಕುರಿತು ಏನಂದ್ರು ?

Leave a Comment