ಶಿವಮೊಗ್ಗ :ಹೊಸನಗರ, ಶಿವಮೊಗ್ಗ ಮತ್ತು ಶಿಕಾರಿಪುರ ತಾಲ್ಲೂಕಿನ ಅಕ್ಕಪಕ್ಕದ ಹೋಬಳಿಗಳ ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಅರಸಾಳು ಮತ್ತು ಕುಂಸಿ ರೈಲು ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಸುವ ನಿರ್ಧಾರವನ್ನು ರೈಲ್ವೆ ಮಂಡಳಿ ಕೈಗೊಂಡಿದೆ.
ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ:
- ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ ರೈಲು ಅರಸಾಳು ನಿಲ್ದಾಣದಲ್ಲಿ 1 ನಿಮಿಷ ನಿಲ್ಲಲಿದೆ.
- ರೈಲು ಸಂಖ್ಯೆ 16205/16206 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್ ರೈಲುಗಳು ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಲಾ 1 ನಿಮಿಷ ನಿಲ್ಲುತ್ತವೆ.
ಈ ನಿಲುಗಡೆಗಳು 24 ಆಗಸ್ಟ್ 2025 ರಿಂದ ಪ್ರಾರಂಭವಾಗಿ 23 ಫೆಬ್ರವರಿ 2026 ರವರೆಗೆ, ಅಂದರೆ ಸುಮಾರು ಆರು ತಿಂಗಳ ಕಾಲ ಮುಂದುವರಿಯಲಿವೆ. ಸಮಯದಲ್ಲಿ ಯಾವುದೇ ಬದಲಾವಣೆ ಆಗದೇ, ಈಗಿರುವ ವೇಳಾಪಟ್ಟಿಯಲ್ಲೇ ನಿಲುಗಡೆ ಜಾರಿಯಲ್ಲಿರುತ್ತದೆ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.
ಹೊಸನಗರ , ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಗ್ರಾಮೀಣ ಪ್ರಯಾಣಿಕರಿಗೆ ಇದು ದೊಡ್ಡ ಅನುಕೂಲವಾಗಲಿದ್ದು, ಸ್ಥಳೀಯರ ಬಹುಕಾಲದ ಬೇಡಿಕೆ ರೈಲ್ವೆ ಇಲಾಖೆಯಿಂದ ಮನ್ನಣೆ ಪಡೆದಂತಾಗಿದೆ.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650