ಅಪರಾಧ ಸುದ್ದಿ

ಕುಂಸಿ ; ಯುವಕನ ಭೀಕರ ಕೊ*ಲೆ!

crime news

ಶಿವಮೊಗ್ಗ : ತಾಲೂಕಿನ ಕುಂಸಿ ಸಮೀಪದ ಚಿಕ್ಕಮರಸ ಗ್ರಾಮದಲ್ಲಿ ಜೂನ್ 29ರ ರಾತ್ರಿ 9 ರಿಂದ 10 ಗಂಟೆಯ ಮಧ್ಯೆ ಭೀಕರ ಕೊ**ಲೆ ನಡೆದಿದೆ. ಮಚ್ಚಿನಿಂದ ಹೊಡೆದು ವ್ಯಕ್ತಿಯೋರ್ವನನ್ನು ನಿರ್ದಯವಾಗಿ ಕೊ**ಲೆ ಹಾಕಲಾಗಿದೆ.

WhatsApp Group Join Now
Telegram Group Join Now
Instagram Group Join Now

ಕೊ*ಲೆಗೀಡಾದ ವ್ಯಕ್ತಿಯನ್ನು ವಸಂತ್ (34) ಎಂದು ಗುರುತಿಸಲಾಗಿದೆ. ಕುಂಸಿ ಗ್ರಾಮದ ನಿವಾಸಿಯಾಗಿದ್ದು, ಕೂಲಿ ಕೆಲಸಮಾಡುತ್ತಾ ಜೀವನ ಸಾಗಿಸುತ್ತಿದ್ದರು. ವಿವಾಹಿತನಾಗಿದ್ದ ವಸಂತ್ ಭೀಕರವಾಗಿ ಕೊ*ಲೆಗೀಡಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.

ಘಟನೆ ನಡೆದ ನಂತರ ಕೂಡಲೇ ಇನ್ಸ್‌ಪೆಕ್ಟರ್ ದೀಪಕ್ ಹಾಗೂ ಅವರ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಸಂತನ ಕೊ**ಲೆಗೆ ನಿಖರವಾದ ಕಾರಣಗಳು ಇನ್ನೂ ಬಹಿರಂಗವಾಗಿಲ್ಲ. ಆದರೂ, ಸ್ಥಳೀಯ ಮೂಲಗಳಿಂದ ದೊರಕಿದ ಮಾಹಿತಿಯ ಪ್ರಕಾರ, ಕುಂಸಿ ಗ್ರಾಮದ ಇಬ್ಬರು ವ್ಯಕ್ತಿಗಳು ಈ ಕೃತ್ಯದಲ್ಲಿ ಭಾಗವಹಿಸಿದ್ದಾಗಿ ಶಂಕಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕೃತ್ಯ ನಡೆದಿದೆ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಸಕ್ರೀಯ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Read more :ರಿಪ್ಪನ್‌ಪೇಟೆ ; ಕರ್ನಾಟಕ ಕಾರ್ಮಿಕ ಪರಿಷತ್‌ ವತಿಯಿಂದ ನೂತನ ಪಿಎಸ್ಐಗೆ ಸನ್ಮಾನ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650