ಸೊರಬ ; ಮಲೆನಾಡಿನ ಅಪ್ಪಟ್ಟ ಗ್ರಾಮೀಣ ಕ್ರೀಡೆಯಾಗಿರುವ ಕೆರೆಬೇಟೆಯಲ್ಲಿ ಏಕ ಕಾಲದಲ್ಲಿ ನೂರಾರು ಜನರು ಕೆರೆಗೆ ಇಳಿದು ಮೀನುಗಳನ್ನು ಹಿಡಿಯುವುದನ್ನು ನೋಡಲು ಕೂಡ ನೂರಾರು ಜನ ಆಗಮಿಸುತ್ತಾರೆ. ಮಳೆಗಾಲದ ಸಂದರ್ಭದಲ್ಲಿ ಕೆರೆಗಳಿಗೆ ಮೀನಿನ ಮರಿಗಳನ್ನು ಬಿಡಲಾಗುತ್ತದೆ. ಬಳಿಕ ಬೇಸಿಗೆಯಲ್ಲಿ ಕೆರೆಗಳು ಬತ್ತಿದಾಗ ಕೆರೆಬೇಟೆ ಸಾರಲಾಗುತ್ತದೆ. ಈ ವೇಳೆ ಗ್ರಾಮಸ್ಥರಲ್ಲಿ ಎಲ್ಲಿಲ್ಲದ ಸಡಗರ.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/16SeNT5dC2/
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಓಟೂರು ಗ್ರಾಮದ ವಡ್ಡಿನಕೆರೆಯಲ್ಲಿ ಮಂಗಳವಾರ ಮೀನು ಶಿಕಾರಿ ಭರ್ಜರಿಯಾಗಿ ಜರುಗಿತು. ಕೆರೆಬೇಟೆಯಲ್ಲಿ ಕೂಣಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಗ್ರಾಮಸ್ಥರು ಮಾತ್ರವಲ್ಲದೇ ಸುತ್ತಲಿನ ಗ್ರಾಮದವರು ಜಾತಿ, ಮತಗಳ ಭೇದವಿಲ್ಲದೆ, ಹಿರಿಯರು, ಕಿರಿಯರೆನ್ನದೇ ಕೆರೆಬೇಟೆಯಲ್ಲಿ ಪಾಲ್ಗೊಂಡಿದ್ದರು.

ಕೆಲವರಿಗೆ ಸುಮಾರು 5 ಕೆ.ಜಿ.ವರೆಗೆ ಮೀನು ಲಭಿಸಿದರೆ, ಕೆಲವರು ಚಿಕ್ಕ ಮೀನುಗಳನ್ನು ಹಿಡಿದು ತೃಪ್ತಿಪಟ್ಟುಕೊಂಡರು.
ವಿಶೇಷವೆಂದರೆ, ಬಿದರಿನ ಕೂಣಿಯ ಜಾಗದಲ್ಲಿ ಕಬ್ಬಿಣದ ಕೂಣಿಗಳು ಸಹ ಬಳಸಲಾಯಿತು. ಗ್ರಾಮ ಸಮಿತಿಯವರು ಯಾವುದೇ ಗಲಾಟೆ ಮತ್ತು ಗೊಂದಲಗಳಿಗೆ ಅವಕಾಶ ನೀಡದಂತೆ ಅಚ್ಚುಕಟ್ಟಾಗಿ ನಿರ್ವಹಿಸಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.