ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಆಗುಂಬೆ ಘಾಟ್ ರಸ್ತೆ ಮತ್ತೆ ಪ್ರಕೃತಿಯ ಕೋಪಕ್ಕೆ ತುತ್ತಾಗಿದೆ. ಐದನೇ ತಿರುವಿನ ಬಳಿ ಧರೆ ಕುಸಿದು, ದೊಡ್ಡ ಮರ ರಸ್ತೆಗೆ ಅಡ್ಡವಾಗಿ ಬಿದ್ದ ಪರಿಣಾಮ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಸಂಜೆ ವೇಳೆ ಸಂಭವಿಸಿದ ಈ ಘಟನೆ ಪ್ರಯಾಣಿಕರಿಗೆ ಭಾರೀ ತೊಂದರೆ ಉಂಟುಮಾಡಿದೆ. ಮರ ಬಿದ್ದ ಪರಿಣಾಮ ರಸ್ತೆ ಸಂಪೂರ್ಣವಾಗಿ ಮುಚ್ಚಿಕೊಂಡಿದೆ. ಸ್ಥಳೀಯರ ಮಾಹಿತಿ ಪ್ರಕಾರ, ಬೆಳಗಿನವರೆಗೆ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ.
ಧರೆ ಕುಸಿದ ಭಾಗದಲ್ಲಿ ಕಲ್ಲುಮಣ್ಣು ಮತ್ತು ದೊಡ್ಡ ಮರ ರಸ್ತೆ ಮಧ್ಯದಲ್ಲಿ ಬಿದ್ದಿರುವುದರಿಂದ ತೆರವು ಕಾರ್ಯ ಗೊಂದಲಮಯವಾಗಿದೆ.ಆಗುಂಬೆ ಘಾಟ್ ರಸ್ತೆ ಮಲೆನಾಡು ಹಾಗೂ ಕರಾವಳಿ ಭಾಗಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದ್ದು, ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಈಗ ಸಂಚಾರ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾದ ಅನಿವಾರ್ಯತೆ ಎದುರಾಗಿದೆ.
ಪ್ರತೀ ಮಳೆಗಾಲದಲ್ಲೂ ಆಗುಂಬೆ ಘಾಟ್ನಲ್ಲಿ ಧರೆ ಕುಸಿತ, ಮರ ಬಿದ್ದು ಸಂಚಾರ ತೊಂದರೆ ಉಂಟಾಗುವುದು ಸಾಮಾನ್ಯವಾಗಿಬಿಟ್ಟಿದೆ. ಹಲವು ಬಾರಿ ರಸ್ತೆ ಬ್ಲಾಕ್ ಆಗಿರುವುದರಿಂದ ಪ್ರಯಾಣಿಕರು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650