ಆಗುಂಬೆ ಘಾಟ್‌ನಲ್ಲಿ ಧರೆ ಕುಸಿತ – ಸಂಚಾರ ಅಸ್ತವ್ಯಸ್ತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಆಗುಂಬೆ ಘಾಟ್‌ ರಸ್ತೆ ಮತ್ತೆ ಪ್ರಕೃತಿಯ ಕೋಪಕ್ಕೆ ತುತ್ತಾಗಿದೆ. ಐದನೇ ತಿರುವಿನ ಬಳಿ ಧರೆ ಕುಸಿದು, ದೊಡ್ಡ ಮರ ರಸ್ತೆಗೆ ಅಡ್ಡವಾಗಿ ಬಿದ್ದ ಪರಿಣಾಮ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸಂಜೆ ವೇಳೆ ಸಂಭವಿಸಿದ ಈ ಘಟನೆ ಪ್ರಯಾಣಿಕರಿಗೆ ಭಾರೀ ತೊಂದರೆ ಉಂಟುಮಾಡಿದೆ. ಮರ ಬಿದ್ದ ಪರಿಣಾಮ ರಸ್ತೆ ಸಂಪೂರ್ಣವಾಗಿ ಮುಚ್ಚಿಕೊಂಡಿದೆ. ಸ್ಥಳೀಯರ ಮಾಹಿತಿ ಪ್ರಕಾರ, ಬೆಳಗಿನವರೆಗೆ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಧರೆ ಕುಸಿದ ಭಾಗದಲ್ಲಿ ಕಲ್ಲುಮಣ್ಣು ಮತ್ತು ದೊಡ್ಡ ಮರ … Continue reading ಆಗುಂಬೆ ಘಾಟ್‌ನಲ್ಲಿ ಧರೆ ಕುಸಿತ – ಸಂಚಾರ ಅಸ್ತವ್ಯಸ್ತ