ಹೊಸನಗರ

ಹೊಸನಗರ: ಖಾಕಿ ಕವಿ ಖ್ಯಾತಿಯ ಮಂಜುನಾಥ್ ಅವರ 11ನೇ ಕವನ ಸಂಕಲನ ‘ಆಶಾಸುಂದರಿ’ ಲೋಕಾರ್ಪಣೆ

ಹೊಸನಗರ: ಪೊಲೀಸ್ ಇಲಾಖೆಯ ಕರ್ತವ್ಯದ ಒತ್ತಡದ ನಡುವೆಯೂ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ, 'ಖಾಕಿ ಕವಿ' ಎಂದೇ ಖ್ಯಾತರಾಗಿರುವ ಹೊಸನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಮಂಜುನಾಥ್ ಅವರ 11ನೇ ಕವನ ಸಂಕಲನ 'ಆಶಾಸುಂದರಿ' ಇತ್ತೀಚೆಗೆ ಬಿಡುಗಡೆಯಾಯಿತು.

InShot 20260913 200422227

ಹೊಸನಗರ: ಪೊಲೀಸ್ ಇಲಾಖೆಯ ಕರ್ತವ್ಯದ ಒತ್ತಡದ ನಡುವೆಯೂ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ, ‘ಖಾಕಿ ಕವಿ’ ಎಂದೇ ಖ್ಯಾತರಾಗಿರುವ ಹೊಸನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಮಂಜುನಾಥ್ ಅವರ 11ನೇ ಕವನ ಸಂಕಲನ ‘ಆಶಾಸುಂದರಿ’ ಇತ್ತೀಚೆಗೆ ಬಿಡುಗಡೆಯಾಯಿತು.

WhatsApp Group Join Now
Telegram Group Join Now
Instagram Group Join Now

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಾಗರ-ಹೊಸನಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಅವರು ಈ ಕೃತಿಯನ್ನು ಲೋಕಾರ್ಪಣೆಗೊಳಿಸಿದರು.

ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, “ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕೃತರಾಗಿರುವ ಮಂಜುನಾಥ್ ಅವರು, ತಮ್ಮ ಬಿಡುವಿಲ್ಲದ ಪೊಲೀಸ್ ವೃತ್ತಿಯ ನಡುವೆಯೂ ಸಮಯ ಮಾಡಿಕೊಂಡು ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ. ಅವರ ಬರಹಗಳಲ್ಲಿರುವ ದೇಶಪ್ರೇಮ, ಪರಿಸರ ಕಾಳಜಿ ಹಾಗೂ ಸಾಮಾಜಿಕ ಬಾಂಧವ್ಯದ ಕಳಕಳಿ ಅವರ ಸೇವೆಯ ಮಹತ್ವವನ್ನು ಸಾರುತ್ತದೆ” ಎಂದು ಅಭಿನಂದನೆ ಸಲ್ಲಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ಕಳೂರು ಸಹಕಾರ ಬ್ಯಾಂಕ್ ಅಧ್ಯಕ್ಷ ದುಮ್ಮ ವಿನಯಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ಚಂದ್ರಮೌಳಿ, ಕಾರ್ಯದರ್ಶಿ ಡಿಎಂ ಸದಾಶಿವಶೆಟ್ಟಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ ಬಿ ಚಿದಂಬರ, ಎಂ.ಪಿ ಸುರೇಶ, ಶುಭಕರ ಪೂಜಾರಿ, ಉಬೆದುಲ್ಲಾಖಾನ್, ಡಿ.ಆರ್ ಮಂಜುನಾಥ್ ಶೆಟ್ಟಿ, ಸಾಕಮ್ಮ, ನೇತ್ರಾ ಸುಬ್ರಾಯ ಭಟ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಮೊದಲಾದವರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]