ಹೊಸನಗರ

ದೇಶದ ಪ್ರತಿಯೊಬ್ಬ ನಾಗರೀಕರನಿಗೆ ಕಾನೂನಿನ ಅರಿವು ಅತಿ ಮುಖ್ಯ ; ನ್ಯಾ. ಫಾರೂಖಾ ಝರೆ

ಹೊಸನಗರ ; ದೇಶದ ಪ್ರತಿಯೊಬ್ಬ ನಾಗರೀಕ ನಿಗೆ ಕಾನೂನಿನ ಅರಿವಿರಬೇಕು. ತಿಳಿಯದೆ ಮಾಡಿದ ತಪ್ಪಿಗೂ ಶಿಕ್ಷೆ, ದಂಢ ವಿಧಿಸುವ ಅವಕಾಶ ಕಾನೂನಿನಲ್ಲಿದೆ ಎಂದು ಇಲ್ಲಿನ ಜೆಎಂಎಫ್ ಸಿ ನ್ಯಾಯಾಲಯದ ಹಿರಿಯ ವ್ಯವಹಾರಗಳ ನ್ಯಾಯಾಧೀಶ ಫಾರೂಖಾ ಝರೆ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಇಲ್ಲಿನ ಪೊಲೀಸ್ ಠಾಣೆ ಆವರಣದಲ್ಲಿ ಸಾರ್ವಜನಿಕರ ಜಾಗೃತಿಗಾಗಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಾಹನ ಸವಾರರು ಸಂಚಾರಿ ನಿಯಮಗಳನ್ನು ಪಾಲಿಸುವುದು ಮುಖ್ಯ ಕರ್ತವ್ಯವಾಗಿದೆ. ಇದು ಸರ್ಕಾರಿ ನೌಕರರಿಗೂ ಅನ್ವಯವಾಗಿದ್ದು, ಇದರಿಂದ ಸಂಭವನೀಯ ‌ಅವಘಡ ತಪ್ಪಿಸಬಹುದು. ಬೈಕ್ ಸವಾರರು ಪ್ರಮಾಣೀಕೃತ ಹೆಲ್ಮೆಟ್ ಧರಿಸಿ ಚಾಲನೆಗೆ ಮುಂದಾಗಬೇಕು. ಅಲ್ಲದೆ, ಪ್ರತಿಯೊಬ್ಬ ವಾಹನದ ಮಾಲೀಕರು ನಿಯಮಿತವಾಗಿ ವಾಹನ ವಿಮಾ, ಹೊಗೆ ಉಗುಳು ಪರಿಶೀಲನಾ ದೃಢೀಕೃತ ಪತ್ರ, ವಾಹನದ ಫಿಟ್ನೆಸ್ ಸರ್ಟಿಫಿಕೇಟ್ ಹೊಂದಿರುವುದು ಕಡ್ಡಾಯ. ಇದರಿಂದ ಪೊಲೀಸ್ ತಪಾಸಣೆ ವೇಳೆ ಕೇಸ್, ದಂಡ, ಶಿಕ್ಷೆಯಿಂದ ಮುಕ್ತವಾಗಲು ಸಾಧ್ಯವೆಂದರು. ಬೈಕ್ ಸವಾರರು ತಮ್ಮ ಹಾಗು ಕುಟುಂಬದ ಸುರಕ್ಷಿತೆಗಾಗಿ ಕಡ್ಡಾಯವಾಗಿ ಹೆಲ್ಮೆಟ್ ಬಳಸುವಂತೆ ಕೋರಿದರು.

ಸಿಪಿಐ ಗುರುಣ್ಣ ಎಸ್ ಹೆಬ್ಬಾಳ್ ಪ್ರಾಸ್ತಾವಿಕ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದಲ್ಲೂ ವಾಹನ ದಟ್ಟಣೆ ಹೆಚ್ಚುತ್ತಿದೆ. ಜನತೆ ವಿವಿಧ ಆಧುನಿಕ ಯಂತ್ರೋಪಕರಣಗಳ ಮೇಲಿನ ವ್ಯಾಮೋಹವೇ ಇದಕ್ಕೆ ಕಾರಣ. ವಾಹನ ಸವಾರರು ಸಂಚಾರಿ ನಿಯಮ ಪಾಲಿಸುವ ಮೂಲಕ ಕಾನೂನನ್ನು ಗೌರವಿಸಬೇಕು. ಸ್ಥಳೀಯ ಹಲವು ದಾನಿಗಳು ಈ ಕುರಿತು ಜಾಗೃತಿ ಮೂಡಿಸಲು ಸೈನ್ ಬೋರ್ಡ್‌ಗಳನ್ನು ದೇಣಿಗೆ ನೀಡಿ ಸಹಕಾರ ನೀಡಿರುವುದು ಶ್ಲಾಘನೀಯ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇದೇ ಸಂದರ್ಭದಲ್ಲಿ ಜೆಎಂಎಫ್ ಸಿ ನ್ಯಾಯಾಲಯದ ಕಿರಿಯ ವ್ಯವಹಾರಗಳ ನ್ಯಾಯಾಧೀಶ ಮಾರುತಿ ಸಿಂಧೆ ಜನಜಾಗೃತಿ ಪೊಲೀಸ್ ಬೈಕ್ ಜಾಥಕ್ಕೆ ಹಸಿರು ನಿಶಾನೆ ತೋರಿದರು.

ಕಾರ್ಯಕ್ರಮ ದಾನಿಗಳಾದ ವರ್ತಕರ ಸಂಘದ‌ ಅಧ್ಯಕ್ಷ ವಿಜೇಂದ್ರ‌ ಶೇಟ್, ಹೊಟೇಲ್ ಉದ್ಯಮಿ ಶೀತಲ್‌ ಶ್ರೀನಿವಾಸ್ ರಾವ್, ಆಟೋ ಸಂಘದ ಪದಾಧಿಕಾರಿಗಳು, ವಾಹನ ಚಾಲಕರು,ಪೊಲೀಸ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಮುಖ್ಯ ಪೇದೆ ವೆಂಕಟೇಶ್ ಸ್ವಾಗತಿಸಿ, ನಿರೂಪಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]