ಬೇಟೆಗಾರರು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು !

Written by Mahesh Hindlemane

Published on:

ಮೂಡಿಗೆರೆ ; ಕಾಫಿ ತೋಟದಲ್ಲಿ ಬೇಟೆಗಾರರು ಅಳವಡಿಸಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ಫೆ.20ರ ಗುರುವಾರ ರಾತ್ರಿಯೇ ಚಿರತೆ ಸಿಲುಕಿದೆ. ಶುಕ್ರವಾರ ಬೆಳಿಗ್ಗೆ ಗಮನಿಸಿದ ಸ್ಥಳೀಯರು, ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆಯನ್ನು ರಕ್ಷಿಸಲು ಪ್ರಯತ್ನಿಸಿದರು.

ಶಿವಮೊಗ್ಗದಿಂದ ಅರವಳಿಕೆ ತಜ್ಞರನ್ನು ಕರೆಸಿ ರಕ್ಷಣೆ ಮಾಡಲು ಮುಂದಾದರು. ಅಷ್ಟರಲ್ಲಿ ಚಿರತೆ ಉಸಿರಾಟ ನಿಲ್ಲಿಸಿದ್ದು, ಮೃತಪಟ್ಟಿದೆ ಎಂದು ಅಧಿಕಾರಿಗಳು ಘೋಷಣೆ ಮಾಡಿದರು. ಉರುಳು ಬಿಡಿಸಿಕೊಳ್ಳುವ ಪ್ರಯತ್ನದಲ್ಲಿ ಸೊಂಟಕ್ಕೆ ಇಳಿದಿದ್ದ ಉರುಳು ಮತ್ತಷ್ಟು ಬಿಗಿಯಾಗಿ ಚಿರತೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದರು.

ಕಾಡು ಹಂದಿಗೆ ಹಾಕಿರುವ ಉರುಳಿಗೆ ಚಿರತೆ ಸಿಲುಕಿರುವ ಸಾಧ್ಯತೆ ಇದೆ. ಮೊದಲಿಗೆ ಕಾಫಿ ತೋಟದ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು. ಮರಣೋತ್ತರ ಪರೀಕ್ಷೆ ಬಳಿಕ ತನಿಖೆ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment