ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ : ಆತಂಕ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಹುಂಚ ಸಮೀಪದ ಕಡಸೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಡೇರಿಗೆ ಹಾಲು ಹಾಕಲು ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಭಾನುವಾರ ಸಂಜೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು ಚಿರತೆ ನೋಡಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1LHvvpQYoZ/

ಈಗಾಗಲೇ ಮೇಯಲು ಬಿಟ್ಟ ಸಾಕಷ್ಟು ಜಾನುವಾರುಗಳನ್ನು ಚಿರತೆ ತಿಂದಿರುವ ಬಗ್ಗೆ ಮಾಹಿತಿ ಇದ್ದು ಜಾನುವಾರುಗಳ ಕಳೇಬರಗಳು ಗ್ರಾಮದ ಅಲ್ಲಲ್ಲಿ ಕಂಡುಬಂದಿದೆ‌.

ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಕಡಸೂರು ನಿವಾಸಿಗಳು ಆಗ್ರಹಿಸಿದ್ದಾರೆ.

Leave a Comment