ರಿಪ್ಪನ್ಪೇಟೆ ; ಹುಂಚ ಸಮೀಪದ ಕಡಸೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.
ಡೇರಿಗೆ ಹಾಲು ಹಾಕಲು ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಭಾನುವಾರ ಸಂಜೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು ಚಿರತೆ ನೋಡಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1LHvvpQYoZ/
ಈಗಾಗಲೇ ಮೇಯಲು ಬಿಟ್ಟ ಸಾಕಷ್ಟು ಜಾನುವಾರುಗಳನ್ನು ಚಿರತೆ ತಿಂದಿರುವ ಬಗ್ಗೆ ಮಾಹಿತಿ ಇದ್ದು ಜಾನುವಾರುಗಳ ಕಳೇಬರಗಳು ಗ್ರಾಮದ ಅಲ್ಲಲ್ಲಿ ಕಂಡುಬಂದಿದೆ.
ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಕಡಸೂರು ನಿವಾಸಿಗಳು ಆಗ್ರಹಿಸಿದ್ದಾರೆ.

