HOSANAGARA ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಸಮೀಪದ ಹಲುಸಾಲೆ ಮಳವಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಗುರುವಾರ ಬೆಳಗ್ಗೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಳವಳ್ಳಿ ಗ್ರಾಮದ ದಿನೇಶ್ ಎಂಬುವವರು ಇಂದು ಬೆಳಗ್ಗೆ ಹಾಲು ತರಲು ತೆರಳುತ್ತಿದ್ದ ವೇಳೆ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.
ಸಾಕು ಪ್ರಾಣಿಗಳು ಹಾಗೂ ದನ-ಕರುಗಳಿಗೆ ಕಂಟಕವಾಗುವ ಭೀತಿ ಎದುರಾಗಿದ್ದು ಚಿರತೆ ಕೆಲ ಗ್ರಾಮಸ್ಥರಿಗೆ ಕಂಡಿದೆಯಾದರೂ ಅರಣ್ಯ ಇಲಾಖೆ ಸಿಬ್ಬಂದಿಗೆ ಜಾಡು ಹಿಡಿಯಲು ಅಸಾಧ್ಯವಾದ ಕಾರಣ ಗ್ರಾಮಸ್ಥರೇ ಮೊಬೈಲ್ ನಲ್ಲಿ ಚಿರತೆ ಹೆಜ್ಜೆಯ ಫೋಟೋ ಸೆರೆಹಿಡಿದು ವಲಯ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ದಯವಿಟ್ಟು ಚಿರತೆಯನ್ನು ಸೆರೆ ಹಿಡಿಯಿರಿ ಅಥವಾ ಓಡಿಸಿ ಎಂದು ಅರಣ್ಯಾಧಿಕಾರಿಗಳಲ್ಲಿ ಹಲುಸಾಲೆ ಮಳವಳ್ಳಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.