ಶಿವಮೊಗ್ಗ

ಸಂದೇಶ ನೀಡುವ ರಚನಾತ್ಮಕ ಚಲನಚಿತ್ರಗಳು ಮೂಡಿಬರಲಿ: ಮಧು ಬಂಗಾರಪ್ಪ

ಶಿವಮೊಗ್ಗ: “ರಾಜಕಾರಣದಲ್ಲಿ ಜಾತಿ, ಧರ್ಮದ ಸೋಂಕು ತಗುಲಿರುವ ಈ ಕಾಲದಲ್ಲಿ, ಸಮಾಜಕ್ಕೆ ಹಿತದ ಸಂದೇಶ ನೀಡುವ ಹಾಗೂ ಮನೋರಂಜನೆಯ ಜೊತೆಗೆ ಜಾಗೃತಿ ಮೂಡಿಸುವ ರಚನಾತ್ಮಕ ಚಲನಚಿತ್ರಗಳ ನಿರ್ಮಾಣವಾಗಬೇಕು” ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಅವರು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಹಾನಗರಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಬೆಳ್ಳಿಮಂಡಲ, ಸಿನಿಮೊಗೆ ಹಾಗೂ ಶಿವಮೊಗ್ಗ ಚಿತ್ರಸಮಾಜದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ದಸರಾ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಚಿತ್ರರಂಗದ ಸವಾಲುಗಳು ಮತ್ತು ಸಾಧನೆಗಳು

ಚಿತ್ರರಂಗದಲ್ಲಿ ಹಲವು ಸಮಸ್ಯೆಗಳಿದ್ದರೂ ತಜ್ಞರು ಹಾಗೂ ಕಲಾವಿದರ ಸಕ್ರಿಯ ಭಾಗವಹಿಸುವಿಕೆಯಿಂದಾಗಿ ರಾಜ್ಯದ ಚಿತ್ರರಂಗ ಜೀವಂತವಾಗಿದೆ. “ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳ ಸಹಾಯದಿಂದ ರಾಜ್ಯದ ನಿರ್ಮಾಪಕರು ಇನ್ನು ಮಡ್ರಾಸ್‌ಗೆ ಹೋಗಬೇಕಾದ ಅವಶ್ಯಕತೆ ಇಲ್ಲ. ನಾನು ನಿರ್ಮಾಪಕರಾಗಿದ್ದ ಕಾಲದಲ್ಲಿ ಸ್ಥಾಪಿಸಿದ ಆಕಾಶ್ ಆಡಿಯೋ ಸಂಸ್ಥೆಯ ನೆನಪು ಇಂದಿಗೂ ತಾಜಾ” ಎಂದು ಮಧು ಬಂಗಾರಪ್ಪ ಹೇಳಿದರು.

ಶಿಕ್ಷಣ ಮತ್ತು ಕಲೆಗಳ ಮಹತ್ವ

“ದೇವಾಲಯದ ಗಂಟೆಗಿಂತ ಶಾಲೆಯ ಗಂಟೆ ಸದ್ದು ಮುಖ್ಯ. ಅದು ಯುವ ಪೀಳಿಗೆಯ ಭವಿಷ್ಯ ರೂಪಿಸುತ್ತದೆ. ಶಿಕ್ಷಣ ಸಮಾಜಕ್ಕೆ ಸ್ಥಾನಮಾನ ನೀಡುತ್ತದೆ” ಎಂದ ಅವರು, ಶಿವಮೊಗ್ಗ ದಸರಾ ಅಂಗವಾಗಿ ಏರ್ಪಡಿಸಿದ್ದ ಚಲನಚಿತ್ರಗಳ ಛಾಯಾಚಿತ್ರ ಪ್ರದರ್ಶನ ಅತ್ಯಂತ ವಿಶಿಷ್ಟವಾಗಿದೆ ಎಂದರು.

ಶಾಸಕ ಚನ್ನಬಸಪ್ಪ ಮಾತು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, “ರಾಜ್ಯ ಸರ್ಕಾರದಿಂದ 50 ಲಕ್ಷ ರೂ. ನೆರವಿನಿಂದ 2.50 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ದಸರಾವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅನೇಕ ವೇದಿಕೆಗಳ ಮೂಲಕ ಸಹಸ್ರಾರು ಕಲಾವಿದರಿಗೆ ಅವಕಾಶ ದೊರೆಯುತ್ತಿದೆ” ಎಂದು ಹೇಳಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕಲಾವಿದರ ಪ್ರತಿಕ್ರಿಯೆಗಳು

“ಸವಾಲುಗಳಿಂದ ಬೆಳ್ಳಿ ತೆರೆ ತನ್ನ ಕಳೆ ಕಳೆದುಕೊಳ್ಳುತ್ತಿರುವುದು ನೋವಿನ ಸಂಗತಿ. ಕಲಾವಿದರನ್ನು ಪ್ರೋತ್ಸಾಹಿಸುವ ಮನಸ್ಸುಗಳು ಸಮಾಜದಲ್ಲಿ ಮೂಡಬೇಕು” ಎಂದು ಹಾಸ್ಯನಟ ಶರಣ್ ಅಭಿಪ್ರಾಯಪಟ್ಟರು.”ಶಿವಮೊಗ್ಗವು ಕಲೆ, ಸಾಹಿತ್ಯ, ಸಿನಿಮಾ, ರಂಗಭೂಮಿ, ರಾಜಕಾರಣ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದೆ. ವಿಶ್ವ ನಕ್ಷೆಯಲ್ಲಿ ಗುರುತಿಸಿಕೊಳ್ಳುವಂತ ಜಿಲ್ಲೆಯಾಗಿದೆ” ಎಂದು ನಟಿ ಕಾರಣ್ಯರಾಮ್ ಹೇಳಿದರು.

ಕಾರ್ಯಕ್ರಮದಲ್ಲಿ ಸೂಡಾ ಅಧ್ಯಕ್ಷ ಎಸ್.ಹೆಚ್. ಸುಂದರೇಶ್, ಪಾಲಿಕೆ ಆಯುಕ್ತ ಮಾಯಣ್ಣಗೌಡ, ರೇಖಾ ರಂಗನಾಥ್, ನಾಗರಾಜ ಕಂಕಾರಿ, ವಿಶ್ವಾಸ್, ಬಿಂಬಶ್ರೀ, ಫಾಲಾಕ್ಷಿ, ಕೃಪಾಕರ, ಅಚ್ಯುತ ನಾರಾಯಣ್ ಸೇರಿದಂತೆ ಗಣ್ಯರು ಹಾಜರಿದ್ದರು.

ಹೊಸನಗರ ; ತಾಲ್ಲೂಕು ಮಟ್ಟದ ಶ್ರೇಷ್ಟ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650