ಶಿವಮೊಗ್ಗ, ಜೂನ್ 21: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮವು 2025–26ನೇ ಸಾಲಿನ ಅನೇಕ ಉದ್ದೇಶಿತ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಆಹ್ವಾನಿತ ಯೋಜನೆಗಳು:
- ಸ್ವಯಂ ಉದ್ಯೋಗ ನೇರ ಸಾಲ ಯೋಜನೆ
- ಬ್ಯಾಂಕ್ ಸಹಯೋಗದೊಂದಿಗೆ ಆಹಾರ ವಾಹಿನಿ/ವಾಹಿನಿ ಯೋಜನೆ
- ವಾಸತಿ ಜಲಶಕ್ತಿ ಯೋಜನೆ
- ಅರಿವು ಶೈಕ್ಷಣಿಕ ಸಾಲ ಯೋಜನೆ (CET, NEET ಕೌನ್ಸೆಲಿಂಗ್ ನಂತರ ಆರಂಭವಾಗಲಿದೆ)
ಅರ್ಹತಾ ನಿಯಮಗಳು:
- ಸಾಮಾನ್ಯ ವರ್ಗದ ಆರ್ಯ ವೈಶ್ಯ ಸಮುದಾಯದವರಾಗಿರಬೇಕು.
- ಅರ್ಜಿದಾರರು ನಮೂನೆ-ಜಿಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಹೊಂದಿರಬೇಕು.
- ಅರ್ಜಿದಾರರು ಕರ್ನಾಟಕದ ನಿವಾಸಿಗಳು ಆಗಿರಬೇಕು.
- ಅವರ ಆಧಾರ್ ಸಂಖ್ಯೆ ಮೊಬೈಲ್ ಸಂಖ್ಯೆಗೆ ಜೋಡಣೆಯಾಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಅಗತ್ಯವಿದೆ.
ಅರ್ಜಿ ಪರಿಶೀಲನೆಯು ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮುಖಾಂತರ ನಡೆಯಲಿದ್ದು, ನಿಗಮದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ವಿಶೇಷ ಮಾಹಿತಿ: 2019–20ರಿಂದ 2021–22 ರವರೆಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿಯಲ್ಲಿ ಸಾಲ ಪಡೆದು, ಸಕಾಲದಲ್ಲಿ ಸಂಪೂರ್ಣ ಮರುಪಾವತಿ ಮಾಡಿದ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಹೆಚ್ಚಿನ ವಿವರಗಳಿಗೆ: ನಿಗಮದ ಸಹಾಯವಾಣಿ ಅಥವಾ ಅಧಿಕೃತ ವೆಬ್ಸೈಟ್ಗೆ ಸಂಪರ್ಕಿಸಬಹುದಾಗಿದೆ.ನಿಗಮದ ಸಹಾಯವಾಣಿ ಸಂಖ್ಯೆ 9448451111, ವೆಬ್ಸೈಟ್ kacdc.karnataka.gov.in ಇಲ್ಲಿ ಹಾಗೂ ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ 577201
Read More :ಟಿಪ್ ಟಾಪ್ ಬಷೀರ್ ಮನೆ ಮೇಲೆ ED ದಾಳಿ: ಸಾಗರದಲ್ಲಿ 18 ಗಂಟೆಗಳಿಗೂ ಹೆಚ್ಚು ಕಾಲ ತನಿಖೆ!
ಅವರು MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.