Shivamogga | ಲೋಕಸಭಾ ಚುನಾವಣೆ-2024 (Loksabha Election-2024) ಮತ ಎಣಿಕೆ Loksabha Election Results ಜೂನ್ 04 ರಂದು ನಡೆಯಲಿದ್ದು ಚುನಾವಣಾ ಆಯೋಗದ ನಿಯಮಾನುಸಾರ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ (Shivamogga DC) ಗುರುದತ್ತ ಹೆಗಡೆ ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಜೂನ್ 04 ರಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಬೆಳಗ್ಗೆ 8.00 ಗಂಟೆ ಆರಂಭಿಸಲಾಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಒಟ್ಟು 17,52,885 ಮತದಾರರು ಇದ್ದು ಒಟ್ಟು 13,72,949 ಮತ ಚಲಾವಣೆಯಾಗಿದೆ. ಮತ ಎಣಿಕೆಗೆ ಒಟ್ಟು 523 ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಮತ ಎಣಿಕೆ ಕುರಿತು ಅಭ್ಯರ್ಥಿಗಳಿಗೆ ಅಥವಾ ಚುನಾವಣಾ ಏಜೆಂಟರಿಗೆ ಜೂನ್ 04 ರಂದು ಬೆಳಗ್ಗೆ 7 ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ತಿಳಿಸಲಾಗಿದೆ. ಬೆಳಿಗ್ಗೆ 7.00 ಗಂಟೆಗೆ ಭದ್ರತಾ ಕೊಠಡಿಯ ಬಾಗಿಲನ್ನು ತೆರೆಯಲು ಕ್ರಮವಹಿಸುವ ಮಾಹಿತಿಯನ್ನು ಅಭ್ಯರ್ಥಿಗಳ ಗಮನಕ್ಕೆ ತರಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್ ಗಳು ಇರುತ್ತದೆ. ಮತ ಎಣಿಕೆ ಟೆಬಲ್ ಕೌಂಟರ್ ಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟರು ಹಾಗೂ ಮತ ಎಣಿಕೆ ಏಜೆಂಟರು ಪ್ರವೇಶಿಸಲು ಅವಕಾಶವಿರುತ್ತದೆ.
ಅಂಚೆ ಮತಪತ್ರಗಳನ್ನು ಬೆಳಿಗ್ಗೆ 8.00 ಗಂಟೆಗೆ ಚುನಾವಣಾಧಿಕಾರಿಗಳ ಮೇಜಿನಲ್ಲಿ ಆರಂಭಿಸಲಾಗುವುದು. ಅಂಚೆ ಮತಪತ್ರಗಳ ಎಣಿಕೆ ಆರಂಭವಾದ 30 ನಿಮಿಷಗಳ ನಂತರ ಕಂಟ್ರೋಲ್ ಯೂನಿಟ್ ಮೂಲಕ ಮತ ಎಣಿಕೆಯನ್ನು ಆರಂಬಿಸಲಾಗುವುದು. ಪ್ರತೀ ಮತ ಎಣಿಕೆ ಟೇಬಲ್ ಗೆ ಒಬ್ಬರು ಮೇಲ್ವಿಚಾರಕರು, ಒಬ್ಬರು ಸಹಾಯಕರು ಮತ್ತು ಒಬ್ಬರು ಮೈಕ್ರೋ ಅಬ್ಸರ್ವರ್ ಗಳನ್ನು ನೇಮಕಗೊಳಿಸಿ ತರಬೇತಿ ನೀಡಲಾಗಿದೆ. ಇ.ವಿ.ಎಂ ಮತ ಎಣಿಕೆಗಳು ಪೂರ್ಣಗೊಂಡ ನಂತರ ಪ್ರತೀ ವಿಧಾನಸಭಾ ಕ್ಷೇತ್ರದಿಂದ ಐದು ವಿವಿಪ್ಯಾಟ್ಗಳ ಎಣಿಕೆಯನ್ನು ಒಂದಾದ ಮೇಲೆ ಒಂದರಂತೆ ಎಣಿಕೆ ಕಾರ್ಯ ಮಾಡಲಾಗುತ್ತದೆ. ಮತ ಎಣಿಕೆ ಹಾಲ್ ನಲ್ಲಿ ಮೊಬೈಲ್ ಗಳಿಗೆ ಅವಕಾಶವಿರುವುದಿಲ್ಲ.

ಮತ ಎಣಿಕೆ ಆವರಣದ ಸುತ್ತಮುತ್ತ ಸೆಕ್ಷನ್ 144 ನ್ನು ಜಾರಿ ಮಾಡಲಾಗಿದೆ ಮಾಧ್ಯಮ ಕೇಂದ್ರವನ್ನು ಮತ ಎಣಿಕೆ ಆವರಣದಲ್ಲಿ ಪ್ರತ್ಯೇಕ ಕೊಠಡಿಯನ್ನು ತೆರೆಯಲಾಗಿದೆ ವಿಧಾನಸಭಾ ಕ್ಷೇತ್ರ 18ರಿಂದ21 ಸುತ್ತಿನ ಎಣಿಕೆ ನಡೆಯಲಿದ್ದು ಪ್ರತಿಯೊಂದು ಸುತ್ತಿನ ಫಲಿತಾಂಶವನ್ನು ಚುನಾವಣಾ ವೀಕ್ಷಕರ ಸಹಿ ಹಾಕಿದ ನಂತರ ಮಾಧ್ಯಮ ಹಾಗೂ ಮೈಕ್ ಮೂಲಕ ತಿಳಿಸಲಾಗುತ್ತದೆ ಎಂದರು.
Loksabha Election Results ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಮಾತನಾಡಿ ಲೋಕಸಭಾ ಚುನಾವಣೆ ಮತ ಏಣಿಕೆ 200 ಮೀಟರ್ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಸಹ್ಯಾದ್ರಿ ಕಾಲೇಜು ಮುಖ್ಯರಸ್ತೆ, ಎಂಆರ್ ಎಸ್ ವೃತ್ತ ವಾಹನ ಸಂಚಾರ ನಿಷೇಧಿಸಲಾಗಿದ್ದು ವಾಹನ ಸವಾರರಿಗೆ ಬದಲಿ ಮಾರ್ಗ ಕಲ್ಪಿಸಲಾಗಿದೆ. 1000ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ, ಹೋಂ ಗಾರ್ಡ್, ಕೆ.ಎಸ್.ಆರ್.ಪಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ವಹಿಸಲಾಗಿದೆ ಹಾಗೂ ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಭೆಗಳನ್ನು ನಡೆಸಿ ಮಾಹಿತಿಯನ್ನು ನೀಡಿಲಾಗಿದೆ ಎಂದರು.
Read More
ತೆಂಗಿನ ಸಸಿಗಳನ್ನು ಕಡಿದು ವಿಕೃತಿ ಮೆರೆದ ಕಿಡಿಗೇಡಿಗಳು, ದಾಖಲಾಯ್ತು ದೂರು
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?