ರಿಪ್ಪನ್ಪೇಟೆ : ಅರಸಾಳು ಬಳಿಯ ರಾಜ್ಯ ಹೆದ್ದಾರಿ ಪಕ್ಕ ಲೋಡ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 15 ಅಡಿ ಆಳದ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮಂಗಳೂರಿನಿಂದ ಬಳ್ಳಾರಿಗೆ ಕೋಕ್ ತುಂಬಿಕೊಂಡು ರಿಪ್ಪನ್ಪೇಟೆ ಮಾರ್ಗವಾಗಿ ತೆರಳುತ್ತಿದ್ದ ಲಾರಿಗೆ ಎದುರುಗಡೆಯಿಂದ ಬಂದ ಬೈಕ್ ಅನ್ನು ತಪ್ಪಿಸಲು ಹೋಗಿ ಕಂದಕಕ್ಕೆ ಬಿದ್ದಿರುವುದಾಗಿ ಹೇಳಲಾಗಿದೆ.
ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

