Accident

ಹೊಸನಗರ ; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಲಾರಿ ಪಲ್ಟಿ, ಸಂಚಾರ ಅಸ್ತವ್ಯಸ್ತ

HOSANAGARA ; ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ 766 ಸಿ ಶಿವಮೊಗ್ಗ ರಸ್ತೆಯ ಶ್ರೀ ಗುರುಶಕ್ತಿ ಆಟೋಮೊಬೈಲ್ಸ್ ಬಳಿ ಹಾನಗಲ್ಲಿನ ಲಾರಿಯೊಂದು ಮಂಗಳೂರಿನಿಂದ ಸೊರಬಕ್ಕೆ ಗೊಬ್ಬರ ತುಂಬಿಕೊಂಡು ತೆರಳುತ್ತಿರುವಾಗ ಸೋಮವಾರ ಬೆಳಗಿನಜಾವ 3:00 ರ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ರಸ್ತೆಗೆ ಮಗುಚಿ ಬಿದ್ದ ಪರಿಣಾಮ ಕೆಲಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅಪಘಾತ ನಡೆದ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಕಡಿದು ಬಾರಿ ಶಬ್ದ ಉಂಟಾದ ಕಾರಣ ಅಕ್ಕ ಪಕ್ಕದ ಮನೆಯವರು ಧಾವಿಸಿ ಲಾರಿ ಒಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಜೀವಹಾನಿಯಾಗಿಲ್ಲ.

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>