ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಚಿವ ಎಸ್. ಮಧು ಬಂಗಾರಪ್ಪ ಅವರು ವಿಧಾನಸೌಧದಲ್ಲಿರುವ ತಮ್ಮ ನೂತನ ಕಚೇರಿಯಲ್ಲಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.
ಬೆಂಗಳೂರಿನ ವಿಧಾನಸೌಧದ ಎರಡನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 262 ಮತ್ತು 262(A)ರಲ್ಲಿ ಸಚಿವರ ನೂತನ ಕಚೇರಿ ಕಾರ್ಯಾರಂಭವಾಗಿದ್ದು, ಶಾಸ್ತ್ರೋಕ್ತ ಪೂಜಾ ವಿಧಿವಿಧಾನಗಳೊಂದಿಗೆ ಮಧು ಬಂಗಾರಪ್ಪ ಅವರು ಕಚೇರಿ ಪ್ರವೇಶಿಸಿದರು.
ಈ ಸಂದರ್ಭದಲ್ಲಿ ಶಾಸಕ ಮಿತ್ರರಾದ ಭೀಮಣ್ಣ ಟಿ. ನಾಯ್ಕ್, ಭೀಮಸೇನ ಬಿ. ಚಿಮ್ಮನಕಟ್ಟಿ ಸೇರಿದಂತೆ ಪಕ್ಷದ ಹಿರಿಯರು, ಶಾಸಕರು, ಸಿಬ್ಬಂದಿ ವರ್ಗದವರು ಹಾಗೂ ಕಾರ್ಯಕರ್ತರು ಸಚಿವರಿಗೆ ಶುಭಾಶಯ ಕೋರಿದರು.
ತಮಗೆ ಶುಭಹಾರೈಸಿದ ಪಕ್ಷದ ಹಿರಿಯರು, ಶಾಸಕ ಮಿತ್ರರು, ಕಚೇರಿ ಸಿಬ್ಬಂದಿ, ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ಸಚಿವ ಮಧು ಬಂಗಾರಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜವಾಬ್ದಾರಿ ಮತ್ತೊಮ್ಮೆ ಮಧು ಬಂಗಾರಪ್ಪ ಅವರಿಗೆ ಲಭಿಸಿರುವ ಹಿನ್ನೆಲೆಯಲ್ಲಿ, ಇಲಾಖೆಯ ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ಶಿಕ್ಷಣ ಕ್ಷೇತ್ರದ ಯೋಜನೆಗಳ ಮೇಲೆ ಈಗ ಗಮನ ನೆಟ್ಟಿದೆ.

