ರಿಪ್ಪನ್ಪೇಟೆ ; ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಏಕಶಿಲಾ ಜಿನಬಿಂಬಕ್ಕೆ ಭಕ್ತವೃಂದದವರು ಮಹಾಭಿಷೇಕ ವಾರ್ಷಿಕ ಜಾತ್ರಾ ಮಹೋತ್ಸವದ ಪಂಚಮಿ ದಿನದಂದು ಹೊಂಬುಜದ ಗುಡ್ಡದ ಬಸದಿ ಎಂದೇ ಕರೆಯಲ್ಪಡುವ ತ್ರಿಕೂಟ ಜಿನಾಲಯದಲ್ಲಿ ನೆರವೇರಿತು.
ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಜಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಪ್ರಾತಃ ಕಾಲದ ನಿತ್ಯವಿಧಿ ಸಹಿತ ಪೂಜಾ ವಿಧಾನಗಳ ಬಳಿಕ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರ ಸಸಂಘದ ಮುನಿಶ್ರೀಗಳು ಆರ್ಯಿಕಾಯವರ ಸಾನಿಧ್ಯದಲ್ಲಿ ಶಾಸ್ತ್ರೋಕ್ತ ರೀತಿಯಲ್ಲಿ ನೆರವೇರಿತು.

ಜಲ, ಹಾಲು, ಎಳನೀರು, ಇಕ್ಷರಸ, ಕಲ್ಕಚೂರ್ಣ, ಕಷಾಯ, ಚಂದನ, ಅಷ್ಟಗಂಧ, ಕೇಸರಿ, ದ್ರವ್ಯಗಳಿಂದ ಅಭಿಷೇಕವನ್ನು ಭಕ್ತ ಸಮುದಾಯದವರು ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಜಿನಭಜನೆ-ವಾದ್ಯಗೋಷ್ಠಿಗಳೊಂದಿಗೆ ನಡೆದ ಮಹಾಭಿಷೇಕವು ಪುಷ್ಪಾರ್ಚನೆ, ಮಂಗಳಾರತಿಯೊಂದಿಗೆ ಸಂಪನ್ನಗೊಂಡಿತು.
ಶ್ರೀ ಪಾರ್ಶ್ವನಾಥ ಕೀ ಜೈ, ಶ್ರೀ ಪದ್ಮಾವತಿ ಮಾತಾಕೀ ಜೈನ, ಜೈನ ಧರ್ಮ ಕೀ ಜೈ ಜಯಕಾರಗಳು ಕೇಳಿಬಂದಿತು.

ಶ್ರೀ ಬಾಹುಬಲಿ ಸ್ವಾಮಿ ಹಾಗೂ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿಯೂ ಪೂಜೆ ಸಲ್ಲಿಸಲಾಯಿತು. ತ್ರಿಕೂಟ ಜಿನಾಲಯದ ಶ್ರೀ ಪಾರ್ಶ್ವನಾಥ ಸ್ವಾಮಿಯ ಮಹಾಭಿಷೇಕದಿಂದ ಭಕ್ತರಿಗೆ ಆಧ್ಯಾತ್ಮ ಮನೋಧರ್ಮ ವರ್ಧಿಸುತ್ತದೆ ಎಂದು ಪೂಜ್ಯ ಶ್ರೀಗಳವರು ಆಶೀರ್ವಚನದಲ್ಲಿ ತಿಳಿಸಿದರು.

ಕಂಬದಹಳ್ಳಿಯ ಪರಮಪೂಜ್ಯ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹಾಗೂ ಕೊಲ್ಹಾಪುರದ ಪರಮಪೂಜ್ಯ ಸ್ವಸ್ತಿಶ್ರೀ ಲಕ್ಷ್ಮಿಸೇನ ಭಟ್ಟಾರಕ ಮಹಾಸ್ವಾಮೀಜಿಯವರು ಉಪಸ್ಥಿತರಿದ್ದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ
RipponpeteMay 31, 2025ಜೂ. 4ಕ್ಕೆ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ