ರಿಪ್ಪನ್ಪೇಟೆ ; ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ಅವರ ಅಗಲಿಕೆಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಮಳಲಿ ಸಂಸ್ಥಾನಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ತಮ್ಮ ಸಂತಾಪ ಸೂಚಿಸಿದ್ದಾರೆ.
ಭೀಮಣ್ಣ ಖಂಡ್ರೆ ಅವರು ಸಾರಿಗೆ ಸಚಿವ ಹುದ್ದೆ ಸೇರಿದಂತೆ ಹಲವಾರು ಉನ್ನತ ಹುದ್ದೆಗಳನ್ನು ಅಲಂಕರಿಸಿದವರಾಗಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಸಮಾಜವನ್ನು ಒಗ್ಗೂಡಿಸುವ ಮಹತ್ಕಾರ್ಯವನ್ನು ಮಾಡಿದ್ದಾರೆ. ಅವರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ಅನುಗ್ರಹಿಸಲಿ ಅವರ ಅಗಲಿಕೆ ನೋವನ್ನು ಸಹಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಅನುಗ್ರಹಿಸಲಿ ಎಂದು ತಿಳಿಸಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

