ರಿಪ್ಪನ್ಪೇಟೆ ; ಹರತಾಳು ಗ್ರಾಮದ ದೊಣಂದೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.
ಕೃಷ್ಣಪ್ಪ (59) ಸಾವನ್ನಪ್ಪಿದ ವ್ಯಕ್ತಿ. ಈತ ದೊಣಂದೂರು ನಿವಾಸಿಯಾಗಿದ್ದು ಕೂಲಿ ಕೆಲಸಮಾಡಿ ಜೀವನ ನಡೆಸುತ್ತಿದ್ದನು. ಸುಮಾರು ಮೂರು ವರ್ಷಗಳಿಂದ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಪ್ಪ ಚಿಕಿತ್ಸೆ ಪಡೆಯುತ್ತಿದ್ದನು. ಮನೆಯಲ್ಲಿ ಬಾವಿ ತೋಡುವ ಕೆಲಸ ನಡೆಯುತ್ತಿದ್ದಾಗ, ಬಾವಿಯಲ್ಲಿ ಸಂಗ್ರಹಿತ ನೀರನ್ನು ಹೊರತೆಗೆದು ಖಾಲಿ ಮಾಡಲು ವಿದ್ಯುತ್ ಪಂಪ್ಸೆಟ್ ಚಾಲನೆ ಮಾಡಲು ವೈರ್ ಅನ್ನು ಅಡುಗೆಮನೆಯ ಸ್ವಿಚ್ಗೆ ಸಂಪರ್ಕಿಸಲು ಹೋದಾಗ ವಿದ್ಯುತ್ ಸ್ಪರ್ಶವಾಗಿ ಅವರ ಬಲಗೈಗೆ ತೀವ್ರ ಗಾಯವಾಗಿತ್ತು.
ಈ ಘಟನೆಯಲ್ಲಿ ಕೃಷ್ಣಪ್ಪ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಪತ್ನಿ ವೇದಾವತಿ ಮತ್ತು ಸ್ಥಳದಲ್ಲಿದ್ದ ಕಾರ್ಮಿಕರು ತಕ್ಷಣ ಅವರನ್ನು ಆನಂದಪುರ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ವೈದ್ಯರು ಪರಿಶೀಲಿಸಿ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮೃತರ ಪತ್ನಿ ವೇದಾವತಿ ನೀಡಿದ ದೂರಿನ ಆಧಾರದ ಮೇಲೆ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

