ನೇಣು ಬಿಗಿದುಕೊಂಡು ಗ್ರಾಪಂ ಸದಸ್ಯ ಆತ್ಮಹತ್ಯೆ !

Written by Mahesha Hindlemane

Published on:

ಸಾಗರ ; ಸಾಲಬಾಧೆ ತಾಳಲಾರದೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಗೌತಮಪುರದ ಮೇಘರಾಜ್ ಬಿ.ಹೆಚ್ (43) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೂಲತಃ ರೈತರಾಗಿರುವ ಮೇಘರಾಜ್ 5 ಲಕ್ಷ ರೂ.ಗಳಿಗೂ ಅಧಿಕ ಬೆಳೆಗಾಗಿ ಸಾಲ ಮಾಡಿರುವ ಮಾಹಿತಿ ತಿಳಿದು ಬಂದಿದೆ.

ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಹಾಗೂ ಗೋಲ್ಡ್ ಲೋನ್ ಹಾಗೂ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಲ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಕಳೆದ ಮೂರು ವರ್ಷದಿಂದ ಕೈಗೆ ಬೆಳೆ ಸರಿಯಾಗಿ ಸಿಗದ ಹಿನ್ನೆಲೆ ಹಾಗೂ ಬೆಳೆ ಹಾನಿಯಾದ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. 

ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More:ಕಾಡಾನೆ ದಾಳಿ: ಭದ್ರಾವತಿಯಲ್ಲಿ ವ್ಯಕ್ತಿ ದುರ್ಮರಣ !

Leave a Comment