ಹೊಸನಗರ

ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ !

ಹೊಸನಗರ ; ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಎನ್.ಡಿ.ಎಫ್.ಆರ್ ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಎನ್.ಡಿ‌.ಎಫ್.ಆರ್ ಸಿಬ್ಬಂದಿಗಳಿಂದ ಕುಮಾರ್ ಎನ್ನುವ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು ಮೂಗಿನಲ್ಲಿ ರಕ್ತ ಬರುವ ಹಾಗೆ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ.

ಮಹಾರಾಷ್ಟ್ರದಿಂದ ಹೊಸನಗರ ಅಗ್ನಿಶಾಮಕ ಸಿಬ್ಬಂದಿಗಳಿಗೆ ತರಬೇತಿ ನೀಡಲು ಎನ್.ಡಿ‌.ಆರ್.ಎಫ್ ಟೀಂ ಬಂದಿತ್ತು. ನಾಲ್ಕೈದು ಜನ ಸಿಬ್ಬಂದಿಗಳಿಂದ ಕುಮಾರ್ ಎನ್ನುವ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಡಿಸೇಲ್ ಹಾಕಿಸಲು ನಿಂತಿದ್ದ ಪಿಕಪ್ ವಾಹನಕ್ಕೆ ಎನ್.ಡಿ.ಎಫ್.ಆರ್ ಸಿಬ್ಬಂದಿಗಳ ವಾಹನ ಡಿಕ್ಕಿ ಹೊಡೆದಿದೆ. ಈ ಅಪಘಾತದ ಬಗ್ಗೆ ಪ್ರಶ್ನೆ ಮಾಡಿದ ಪಿಕಪ್ ವಾಹನದವನಿಗೆ ಅವಾಚ್ಯ ಶಬ್ದಗಳಿಂದ ಸಿಬ್ಬಂದಿಗಳು ನಿಂದಿಸಿದ್ದಾರೆ. ಪಿಕಪ್ ಚಾಲಕನಿಗೆ ಯಾಕೇ ನಿಂದನೆ ಮಾಡುತ್ತಿದ್ದೀರಾ? ಎಂದು ಕುಮಾರ್ ಪ್ರಶ್ನೆ ಮಾಡಿದಕ್ಕೆ, ನೀನು ಯಾರು ಪ್ರಶ್ನೆ ಮಾಡಲು? ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಸಿಬ್ಬಂದಿಗಳು ಕುಮಾರ್ ಎಂಬುವನಿಗೆ ಹಲ್ಲೆ ಮಾಡಿದ್ದಾರೆ.

ಗಂಭೀರ ಗಾಯಗೊಂಡ ಕುಮಾರ್ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>