ಹೊಸನಗರ ; ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಹೊಸನಗರದ ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಜೆ.ಸಿ.ಎಂ ರಸ್ತೆಯ ದಿ|| ಕೆ.ಶಂಕರರಾವ್ ರಾಜೀವಮ್ಮರ ಮೊಮ್ಮಗ ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಎಸ್. ನಾಗರಾಜ್ ಮತ್ತು ಮಂಜುಳಾ ದಂಪತಿ ಪುತ್ರ ಮನ್ವಿತ್ 625ಕ್ಕೆ 607 ಅಂಕ ಪಡೆದು 97.12% ಪಡೆದಿರುತ್ತಾರೆ.
ಕನ್ನಡದಲ್ಲಿ 125ಕ್ಕೆ 124, ಇಂಗ್ಲೀಷ್ನಲ್ಲಿ 100ಕ್ಕೆ 95, ಹಿಂದಿ100ಕ್ಕೆ 99, ಗಣಿತದಲ್ಲಿ 100ಕ್ಕೆ 93 ಸಮಾಜ ವಿಜ್ಞಾನದಲ್ಲಿ 100ಕ್ಕೆ 100 ಹಾಗೂ ವಿಜ್ಞಾನದಲ್ಲಿ 100ಕ್ಕೆ 96 ಅಂಕಗಳನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಯ ಸಾಧನೆ :
ಎಸ್ಎಸ್ಎಲ್ಸಿ ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಹಗಲು-ರಾತ್ರಿ ಓದುತ್ತಿದ್ದರೆ ಈ ವಿದ್ಯಾರ್ಥಿ ಸತತ ಮೂರು ವರ್ಷಗಳಿಂದ ಬೆಳಿಗ್ಗೆ 5 ಗಂಟೆಯಿಂದ ಮನೆ-ಮನೆಗೆ ಪತ್ರಿಕೆ ವಿವರಿಸುತ್ತಿದ್ದ ಈತ ಈ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ.
ಅಭಿನಂದನೆ:
ಈ ವಿದ್ಯಾರ್ಥಿಯ ಸಾಧನೆಗೆ ಹೋಲಿ ರಿಡೀಮರ್ ಶಾಲೆಯ ಮುಖ್ಯ ಶಿಕ್ಷಕಿ ವಿಲ್ಮಾ ಪಿಂಟೋ ಹಾಗೂ ಸಹ ಶಿಕ್ಷಕಿಯರು ಕೋಟೆಗಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಶಿಧರ್ ನಾಯ್ಕ್, ಕೋಟೆಗಾರ್ ಯುವಕ ಸಂಘದ ಅಧ್ಯಕ್ಷ ಮಾವಿನಕೊಪ್ಪ ಸತೀಶ್, ಅಭಿನಂದಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





