HOSANAGARA ; ನಾಲ್ಕು ವರ್ಷಗಳ ಹಿಂದೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸರ್ಕಾರದ ಹಣ ವ್ಯಯ ಮಾಡಿ ಮಾಸ್ತಿಕಟ್ಟೆಯ ಮಧ್ಯ ಭಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲಾಗಿದ್ದು ಈ ಕಟ್ಟಡ ಸರಿಯಾಗಿ ಕಾಮಗಾರಿ ನಡೆಸದೇ ಉದ್ಘಾಟನೆ ಕಾಣದೇ ಹೊಸ ಅಂಬೇಡ್ಕರ್ ಭವನ ಈಗ ಹಳೆಯ ಭವನವಾಗಿದ್ದು ಇದರ ಉದ್ಘಾಟನೆ ಯಾವಾಗ? ಎಂದು ಹೊಸನಗರ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಜಿ.ವಿ ರವೀಂದ್ರ ಸರ್ಕಾರಕ್ಕೆ ಹಾಗೂ ಆಡಳಿತ ಮಂಡಳಿಗೆ ಪ್ರಶ್ನಿಸಿದ್ದಾರೆ.
ಈ ಅಂಬೇಡ್ಕರ್ ನಿರ್ಮಿಸುವಾಗ ಯಾವುದೇ ಕ್ರಮ ಕೈಗೊಳ್ಳದೇ ನಿರ್ಮಿಸಲಾಗಿದ್ದು ಈ ಭವನಕ್ಕೆ ಹೋಗಲು ಯಾವುದೇ ದಾರಿಯಿಲ್ಲ. ಅಂಬೇಡ್ಕರ್ ಭವನ ನಿರ್ಮಿಸುವಾಗ ಭವನದ ಕಿಟಕಿ, ಬಾಗಿಲು ಸರಿಯಾದ ರೀತಿಯಲ್ಲಿ ಅಳವಡಿಸದೇ ಇರುವುದು ವಿದ್ಯುತ್ ಸೌಲಭ್ಯ ಪಡೆಯದೇ ಇರುವುದು ಸಂಬಂಧಪಟ್ಟ ಅಧಿಕಾರಿಗಳಿಗೆ ಆಗಾಗ ದೂರವಾಣಿ ಮೂಲಕ ಈ ಭವನದ ಬಗ್ಗೆ ತಿಳಿಸುತ್ತಿದ್ದರೂ ಇಲ್ಲಿಯವರೆಗೂ ಗಮನ ಹರಿಸದೇ ಇರುವುದು ಏಕೆ? ಎಂಬ ಪ್ರಶ್ನೆ ಉದ್ಭವವಾಗಿದೆ.
ಅಂಬೇಡ್ಕರ್ ಭವನ ನಿರ್ಮಿಸಿದ ಮೇಲೆ ಆ ಭವನವನ್ನು ಗ್ರಾಮ ಪಂಚಾಯಿತಿ ಅಧೀನಕ್ಕೆ ನೀಡಬೇಕಾಗಿತ್ತು ಆದರೆ ಇಲ್ಲಿಯವರೆಗೂ ಗ್ರಾಮ ಪಂಚಾಯಿತಿಗೆ ನೀಡಿಲ್ಲ. ಮುಂದಿನ ದಿನದಲ್ಲಿ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಿ ಗ್ರಾಮ ಪಂಚಾಯಿತಿ ಅಧೀನಕ್ಕೆ ನೀಡದಿದ್ದರೆ ಹೊಸನಗರ ರೈತ ಸಂಘದ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.