ಹೊಸನಗರ ; ಫೆ.7ರ ಶುಕ್ರವಾರ ಆಗ್ರದ ವಾಯುಪಡೆ ತರಬೇತಿ ಕೇಂದ್ರದಲ್ಲಿ ನಡೆದ ದುರ್ಘಟನೆಯಲ್ಲಿ ದುರಂತ ಸಾವು ಕಂಡಿದ್ದ ಎಟಿಎಸ್ ತರಬೇತುದಾರ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ ಅವರ ಸ್ವಗ್ರಾಮ ತಾಲೂಕಿನ ಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೋರನಗದ್ದೆ ನಿವಾಸಕ್ಕೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬುಧವಾರ ಭೇಟಿ ನೀಡಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳುವ ಮೂಲಕ ಮೃತನ ಕುಟುಂಬಕ್ಕೆ ನೈತಿಕ ಬಲ ತುಂಬುವ ಪ್ರಯತ್ನ ಮುಂದಾದರು.

ಭಾರತೀಯ ವಾಯುಪಡೆಯ ಸ್ಕೈ ಡೈವಿಂಗ್ ತರಬೇತಿ ವೇಳೆ ಮಂಜುನಾಥ್ ಅವರ ಅಕಾಲಿಕ ಸಾವು ದೇಶಕ್ಕೆ ತುಂಬಲಾರದ ನಷ್ಟ. ಆತನ ಕುಟುಂಬ ವರ್ಗ ಶೋಕಸಾಗರದಲ್ಲಿದೆ. ದೇಶ ರಕ್ಷಣಾ ಕಾರ್ಯದಲ್ಲಿ ಮೃತ ಸೇನಾನಿ ಸೇವೆಯನ್ನು ದೇಶದ ನಾಗರೀಕರು ಮರೆಯಬಾರದು. ದೇವರು ಮೃತನ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಿ ಕಾಪಾಡಲಿ ಎಂದು ಮೃತನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪ್ರಾರ್ಥಿಸಿದರು.

ಪ್ರೀತಿಸಿ ಮದುವೆಯಾಗಿದ್ದ ಮೃತ ಮಂಜುನಾಥ ಅವರ ಅಗಲಿಕೆಯಿಂದ ಮೊದಲೇ ನೊಂದಿದ್ದ ಪತ್ನಿ ಕಲ್ಪಿತಾ, ಸಚಿವರು ಸಂತೈಸಲು ಮುಂದಾದಾಗ ಇಡೀ ಕುಟುಂಬವೇ ಒಟ್ಟಾಗಿ ಕಣ್ಣೀರಿಟ್ಟ ದೃಶ್ಯ ಕಲ್ಲೆದೆ ಕರಗುವಂತ್ತಿತ್ತು.

ಈ ವೇಳೆ ಮಂಜುನಾಥ್ ಓದಿದ ಸಂಕೂರು ಸರ್ಕಾರಿ ಪ್ರಾಥಮಿಕ ಶಾಲೆಯ ಶಾಲಾಭಿವೃದ್ದಿ ಸಮಿತಿ ಸದಸ್ಯರು ಸಚಿವರನ್ನು ಭೇಟಿ ಮಾಡಿ, ಯೋಧನ ಸವಿನೆನಪಿಗಾಗಿ ಆತನ ಹೆಸರಿನಲ್ಲಿ ಸರ್ಕಾರದ ವತಿಯಿಂದ ಹೊಸ ಶಾಲಾ ಕಟ್ಟಡದ ನಿರ್ಮಾಣ ಹಾಗು ಗ್ರಾಮದ ವೃತ್ತದಲ್ಲಿ ಮೃತ ಸೈನಿಕ ಮಂಜುನಾಥನ ಪುತ್ಥಳಿ ಸ್ಥಾಪನೆಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದರು.

ಇದಕ್ಕೆ ಸೂಕ್ತವಾಗಿ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ, ತಿಂಗಳೊಳಗಾಗಿ ಈ ಕುರಿತು ಅಗತ್ಯ ಕ್ರಮಕ್ಕೆ ಮುಂದಾಗಿ, ಇಲಾಖೆಗೆ ವರದಿ ಸಲ್ಲಿಸುವಂತೆ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಅವರಿಗೆ ಸೂಚಿಸಿದರು. ಈ ಬಗ್ಗೆ ವಿಶೇಷ ಕಾಳಜಿ ವಹಿಸುವ ಇಂಗಿತವನ್ನು ಸಚಿವ ಮಧು ವ್ಯಕ್ತ ಪಡಿಸಿದರು.

ಇದೇ ಸಂದರ್ಭದಲ್ಲಿ ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಧರ್ಮದರ್ಶಿ ಡಾ.ರಾಮಪ್ಪ ಅವರ ಪುತ್ರ ರವಿ ಮೃತನ ಕುಟುಂಬಕ್ಕೆ ಧನ ಸಹಾಯದ ಚೆಕ್ ವಿತರಿಸಿದರು.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/19wXUxcuXz/
ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯ ಬಂಡಿ ರಾಮಚಂದ್ರ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಸಂಚಾಲಕ ಅಮೀರ್ ಹಂಜಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ಶಾಸಕ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜುನಾಥ್ ಸೇರಿದಂತೆ ಹಲವಾರು ಹಾಜರಿದ್ದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು