SORABA ; ಮನೆ ಮುಂದೆ ನಿಲ್ಲಿಸಿದ್ದ ಬೈಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಬೋವಿ ಕಾಲೋನಿಯಲ್ಲಿ ಶುಕ್ರವಾರ ಬೆಳಗಿನಜಾವ ನಡೆದಿದೆ.
ಬೋವಿ ಕಾಲೋನಿ ನಿವಾಸಿ ದುರ್ಗಪ್ಪ ಬೋವಿ ಎಂಬುವವರಿಗೆ ಸೇರಿದ ಬೈಕಿಗೆ ಬೆಳಗಿನಜಾವ 5 ಗಂಟೆ ಸುಮಾರಿಗೆ ಯಾರೋ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ನೆರೆ ಮನೆಯ ನಿವಾಸಿಗಳು ಬೆಂಕಿಯ ತೀವ್ರತೆ ಗಮನಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಭಾಗಶಃ ಬೈಕ್ ಸುಟ್ಟು ಹೋಗಿದೆ.

ಬೈಕಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದುರ್ಗಪ್ಪ ಅವರ ಪುತ್ರ ಶ್ರೀಧರ್ ಒತ್ತಾಯಿಸಿದ್ದಾರೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.