Chikmagaluru News

ನಾಪತ್ತೆಯಾಗಿದ್ದ SSLC ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆ !

ಕಳಸ ; ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ ಬಳಿ ಭದ್ರಾ ನದಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶ್ರೇಯಸ್ (16) ಮೃತ ವಿದ್ಯಾರ್ಥಿ. ಕಳಸ ಪಟ್ಟಣದ ಖಾಸಗಿ ಶಾಲೆಯಲ್ಲಿ ಶ್ರೇಯಸ್ ವ್ಯಾಸಂಗ ಮಾಡುತ್ತಿದ್ದ. ಮೂಲತಃ ಹಾಸನ ಜಿಲ್ಲೆಯ ಬೇಲೂರು ನಿವಾಸಿಯಾಗಿದ್ದಾನೆ. ಕಳಸ‌ ಪಟ್ಟಣದ ಚಿಕ್ಕಪ್ಪನ ನಿವಾಸದಲ್ಲಿ ವಾಸವಿದ್ದ. ಮಾರ್ಚ್ 16ರಂದು ನಾಪತ್ತೆಯಾಗಿದ್ದ. ಕಳಸ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಸದ್ಯ ಶ್ರೇಯಸ್ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು ಭದ್ರಾ ನದಿಯಿಂದ ಶ್ರೇಯಸ್​ ಶವವನ್ನು ಪೊಲೀಸರು ಹೊರತೆಗೆದಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>