ಚಕ್ರಾ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಯುವಕನ ಕುಟುಂಬಕ್ಕೆ ₹ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಆರಗ ಜ್ಞಾನೇಂದ್ರ

Written by Mahesha Hindlemane

Published on:

ಹೊಸನಗರ ; ಕಳೆದ ಸೆಪ್ಟೆಂಬರ್ ತಿಂಗಳ 19ರಂದು ತೆಪ್ಪದಲ್ಲಿ ಚಕ್ರಾ ಹಿನ್ನೀರು ದಾಟುತ್ತಿರುವಾಗ ಸಂಭವಿಸಿದ ಅವಘಡದಲ್ಲಿ ಸಾವಿಗೀಡಾಗ ತಾಲೂಕಿನ ಹೊಸೂರು-ಸಂಪೆಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಂಟ್ವಾಡಿ ಮಜಿರೆ ವಾಸಿ ಮೃತ ಯುವಕ ಪೂರ್ಣೇಶ್ ಕುಟುಂಬಕ್ಕೆ ಶಾಸಕ ಆರಗ ಜ್ಞಾನೇಂದ್ರ ಸರ್ಕಾರದ 5 ಲಕ್ಷ ರೂ‌. ಮೌಲ್ಯದ ಪರಿಹಾರದ ಚೆಕ್ ಅನ್ನು ಮೃತನ ಕುಟುಂಬಕ್ಕೆ ಹಸ್ತಾಂತರಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬಳಿಕ ಮಾತನಾಡಿದ ಅವರು, ಈ ಭಾಗದ ಪರಿಶಿಷ್ಟ ಕುಟುಂಬಗಳಿಗೆ ಸಂಚಾರ ಸಂಪರ್ಕ ಕಲ್ಪಿಸುವ ದೃಷ್ಟಿಯಿಂದ ಪೂರ್ಣೇಶ್ ಮೃತಪಟ್ಟ ಸಮೀಪದಲ್ಲಿ 25 ಲಕ್ಷ ರೂ. ಅನುದಾನದಲ್ಲಿ ಕಾಲುಸೇತುವೆ ನಿರ್ಮಾಣಕ್ಕೆ ಈಗಾಗಲೇ ತಯಾರಿ ನಡೆದು ಹಣ ಬಿಡುಗಡೆಯಾಗಿದೆ. ಬರುವ ಬೇಸಿಗೆಯಲ್ಲಿ ತ್ವರಿತ ರೀತಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಆರಂಭಗೊಳ್ಳಲಿದೆ ಎಂಬ ಇಂಗಿತ ವ್ಯಕ್ತಪಡಿಸಿದರು.

ಈ ವೇಳೆ ತಹಸೀಲ್ದಾರ್ ಭರತ್ ರಾಜ್, ಶಿರಸ್ತೇದಾರ್ ಕಟ್ಟೆ ಮಂಜುನಾಥ್, ಪ್ರಮುಖರಾದ ಕೆ.ವಿ.ಕೃಷ್ಣಮೂರ್ತಿ, ರಮಾಕಾಂತ್ ಸೇರಿದಂತೆ ಹಲವರು ಇದ್ದರು.

Leave a Comment