Hosanagara

ವಕ್ಫ್ ತಿದ್ದುಪಡಿ ಮಸೂದೆ ಸ್ವಾಗತ ; ಶಾಸಕ ಆರಗ ಜ್ಞಾನೇಂದ್ರ

ಹೊಸನಗರ ; ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವಕ್ಫ್ ಕಾಯ್ದೆಗೆ ತಿದ್ದುಪಡಿ ಕುರಿತಂತೆ ಇತ್ತೀಚೆಗೆ ಲೋಕಸಭೆ ಹಾಗೂ ರಾಜ್ಯಸಭೆ ಸದನಗಳಲ್ಲಿ ಸುಮಾರು 13 ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ ನಡೆದು ಎರಡು ಸದನಗಳಲ್ಲಿ ಕಾಯ್ದೆ ತಿದುಪಡಿಗೆ ಅನುಮೋದನೆ ದೊರೆತಿತ್ತು. ಇಂದು ಅದಕ್ಕೆ ರಾಷ್ಟ್ರಪತಿಗಳ ಅಂಕಿತ ದೊರೆತಿದ್ದು, ಇದು ಕಾಯ್ದೆಯಾಗಿ ರೂಪುಗೊಂಡಿದೆ ಎಂದು ಮಾಜಿ ಗೃಹ ಸಚಿವ, ಶಾಸಕ ಅರಗ ಜ್ಞಾನೇಂದ್ರ ಹರ್ಷ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪಟ್ಟಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿ, ಸಂವಿಧಾನ ಬಾಹಿರ ಕಾಯ್ದೆಗಳ ಮೂಲಕ ಒಂದು ಸಮುದಾಯದ ಒಲೈಕೆ, ಮತಕ್ಕಾಗಿ ರಾಜಕಾರಣದ ಮೂಲಕ ತುಷ್ಠಿಕರಿಸುವುದಕ್ಕೆ ಈ ಕಾಯ್ದೆ ಜಾರಿಗೊಳ್ಳುವ ಮೂಲಕ ಇತಿಶ್ರೀ ಹಾಡಲಾಗಿದೆ ಎಂದರು. ಈ ಕಾರಣಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ಅಮಿತ್ ಶಾ ಅವರಿಗೆ ಅಭಿನಂದಿಸಿದ ಶಾಸಕ ಆರಗ, ಜಾತ್ಯತೀತ ಎಂಬುದು ಒಂದು ಸಮುದಾಯದ ತುಷ್ಠಿಕರಣಕ್ಕೆ ಮಾತ್ರ ಮೀಸಲಾಗಬಾರದು. ಇಲ್ಲಿ ಎಲ್ಲರೂ ಒಗ್ಗೂಡಿ ಬದುಕಬೇಕಿದೆ. ದೇಶವು ಸರ್ವಧರ್ಮಗಳ ಶಾಂತಿಯ ತೋಟದಂತಿರಬೇಕು ಎಂತಾದರೆ, ಇಂತಹ ಕಾಯ್ದೆಗಳನ್ನು ಜಾರಿಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಸರಿಯಾದ ಹೆಜ್ಜೆ ಇಟ್ಟಿದೆ ಎಂದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>