ಹೊಸನಗರ : ಇಲ್ಲಿನ ಮಾವಿನಕೊಪ್ಪ ಗಂಗಾಧರೇಶ್ವರ ದೇವಸ್ಥಾನ ಸುಮಾರು ₹ 3 ಕೋಟಿ ವೆಚ್ಚದಲ್ಲಿ ನೂತನ ಶಿಲಾಮಯ ದೇಗುಲ ನಿರ್ಮಾಣ ಕಾರ್ಯ ನಡೆಯುತ್ತಿದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಶಾಸಕರ ನಿಧಿಯಿಂದ ₹ 3 ಲಕ್ಷ ಹಣ ನೀಡಿದ್ದಾರೆ ಎಂದು ಗಂಗಾಧರೇಶ್ವರ ಶಿಲಾನ್ಯಾಸ ಕಟ್ಟಡ ಸಮಿತಿ ಅಧ್ಯಕ್ಷ ಬೃಂದಾವನ ಪ್ರವೀಣ್ ತಿಳಿಸಿದರು.
ನೂತನವಾಗಿ ಶಿಲಾಮಯ ಗಂಗಾಧರೇಶ್ವರ ದೇವಸ್ಥಾನವನ್ನು ನಿರ್ಮಾಣ ಮಾಡಲಾಗುತ್ತಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ದೇವಸ್ಥಾನಕ್ಕೆ ಆಗಮಿಸಿ ಈಗ ಶಾಸಕರ ನಿಧಿಯಿಂದ ₹ 3 ಲಕ್ಷ ಹಣ ನೀಡಿ, ಮುಂದಿನ ದಿನದಲ್ಲಿ ಸರ್ಕಾರದಿಂದ ₹ 10 ಲಕ್ಷ ಹಣವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಅಭಿನಂದನೆ :
ಸುಮಾರು ₹ 3 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ದೇವಸ್ಥಾನಕ್ಕೆ ಆಗಮಿಸಿ ದೇವಸ್ಥಾನದ ಕೆಲಸಕ್ಕೆ ಮೆಚ್ಚುಗೆ ಸೂಚಿಸುವುದರ ಜೊತೆಗೆ ₹ 3 ಲಕ್ಷ ಶಾಸಕರ ನಿಧಿಯಿಂದ ಹಣ ನೀಡಿದ್ದು ಮುಂದಿನ ದಿನದಲ್ಲಿ ಇನ್ನೂ ₹ 10 ಲಕ್ಷ ಹಣ ನೀಡುವುದಾಗಿ ಭರವಸೆ ನೀಡುವುದರ ಜೊತೆಗೆ ದೇವಸ್ಥಾನಕ್ಕೆ ಹಕ್ಕುಪತ್ರವಿಲ್ಲದ ಕಾರಣ ಹಕ್ಕುಪತ್ರ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದು ಶಾಸಕಬೇಳೂರು ಗೋಪಾಲಕೃಷ್ಣರಿಗೆ ಆಡಳಿತ ಮಂಡಳಿಯ ಪರವಾಗಿ ಅಧ್ಯಕ್ಷ ಬೃಂದಾವನ ಪ್ರವೀಣ್ ಅಭಿನಂದಿಸಿದ್ದಾರೆ.
ಶಾಸಕರು ಗಂಗಾಧರೇಶ್ವರ ದೇವಸ್ಥಾನಕ್ಕೆ ಬೇಟಿ ನೀಡುವ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಗೌರವಾಧ್ಯಕ್ಷ ನಾಗರಾಜ್ ಕಾಮತ್, ಕಾರ್ಯದರ್ಶಿ ಎನ್ ಗಣೇಶ್, ಉಪಾಧ್ಯಕ್ಷ ರಘು, ಶ್ರೀಧರ, ಮಹೇಂದ್ರ, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಹೆಚ್. ಶ್ರೀನಿವಾಸ್, ಕೆ.ಜಿ. ನಾಗೇಶ್, ಮಹಮದ್ ಗೌಸ್, ಮಂಜುನಾಥ್(ಬಾಬು) ಅರ್ಚಕರಾದ ಶಂಕರ ಭಟ್, ಹಾಗೂ ದೇವಸ್ಥಾನ ಕಟ್ಟಡ ಸಮಿತಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದರು.

