Ripponpete

ಸುಂಟರಗಾಳಿಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ, ಪರಿಶೀಲನೆ

ರಿಪ್ಪನ್‌ಪೇಟೆ ; ಇಂದು ಬೆಳಗ್ಗೆ ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ಮನೆಗಳ ಮೇಲ್ಚಾವಣಿ ಮತ್ತು ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿ ಅಪಾರ ಪ್ರಮಾಣದ ಹಾನಿ ಸಂಭವಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಧೈರ್ಯ ತುಂಬಿ ವೈಯಕ್ತಿಕ ಪರಿಹಾರ ನೀಡುವ ಮೂಲಕ ಶೀಘ್ರದಲ್ಲಿಯೇ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ವಾಯುಭಾರ ಕುಸಿತದಿಂದಾಗಿ ಕಳೆದ ಎರಡ್ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು ದಿಢೀರ್ ಈ ರೀತಿಯಲ್ಲಿ ಗಾಳಿ ಬೀಸಿದ ಪರಿಣಾಮದಿಂದಾಗಿ ವಿದ್ಯುತ್ ಕಂಬಗಳು ಉರುಳಿ ರಸ್ತೆ ಮೇಲೆ ಬಿದ್ದಿದ್ದರೆ ಮನೆ ಮೇಲೆ ತೆಂಗಿನ ಮರ ಉರುಳಿದ್ದು, ಮನೆಯ ಮೇಲ್ಚಾವಣಿ ಹಾರಿ ಹೋಗಿರುವುದನ್ನು ಕಂಡು ಶಾಸಕ ಗೋಪಾಲಕೃಷ್ಣ ಬೇಳೂರನ್ನು ಕ್ಷಣಕಾಲ ಮೂಕ ವಿಷ್ಮಯರನ್ನಾಗಿಸಿತು.

ಕಂದಾಯ ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಮಾಡುವಂತೆ ಸೂಚಿಸಿದ ಅವರು, ತುರ್ತಾಗಿ ಸ್ಥಳೀಯ ಗ್ರಾಮಾಡಳಿತದಿಂದ ಮನೆಯ ಮೇಲ್ಚಾವಣಿಗೆ ಹೆಂಚು, ಶೀಟ್ ಮತ್ತು ಇನ್ನಿತರ ಅಗತ್ಯ ಪಾತ್ರೆಗಳು, ಆಹಾರ ಪದಾರ್ಥಗಳನ್ನು  ನೀಡುವಂತೆ ಸೂಚಿಸಿದರು.

ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿಯವರು ಮತ್ತು ಕಾಂಗ್ರೆಸ್ ಮುಖಂಡರು, ಪಿಡಿಒ ನಾಗರಾಜ್, ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
  

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>